ಭದ್ರಾವತಿ ನಗರದೆಲ್ಲೆಡೆ ಕೋವಿಡ್-೧೯ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಅನುಮತಿ ನೀಡಬೇಕೆಂದು ಸೋಷಿಯಲ್ ಡೆಮಾಕೆಟ್ರಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಗರಸಭೆ ಪೌರಾಯುಕ್ತ ಮನೋಹರ್ಗೆ ಮನವಿ ಸಲ್ಲಿಸಲಾಗಿದೆ.
ಭದ್ರಾವತಿ, ಜು. ೧೫: ನಗರದೆಲ್ಲೆಡೆ ಕೋವಿಡ್-೧೯ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡಿಸಲು ಅನುಮತಿ ನೀಡಬೇಕೆಂದು ಸೋಷಿಯಲ್ ಡೆಮಾಕೆಟ್ರಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ನಗರಸಭೆ ಪೌರಾಯುಕ್ತ ಮನೋಹರ್ಗೆ ಮನವಿ ಸಲ್ಲಿಸಲಾಗಿದೆ.
ನಗರಸಭೆ ವ್ಯಾಪ್ತಿ ವಾರ್ಡ್ ೫ ಮತ್ತು ೭ರ ವ್ಯಾಪ್ತಿಯಲ್ಲಿ ಸೋಂಕು ಹರಡದಂತೆ ಜು.೧೭ ಮತ್ತು ೧೯ರಂದು ಎರಡು ದಿನ ಸ್ಯಾನಿಟೈಸರ್ ಸಿಂಪಡಿಸಲು ಅನುಮತಿ ಜೊತೆಗೆ ಸೂಕ್ತ ಮಾರ್ಗದರ್ಶ ನೀಡುವಂತೆ ಮನವಿ ಮಾಡಲಾಗಿದೆ.
ಸೋಷಿಯಲ್ ಡೆಮಾಕೆಟ್ರಿಕ್ ಪಾರ್ಟಿ ಆಫ್ ಇಂಡಿಯಾದ ಪ್ರಮುಖರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment