Tuesday, July 14, 2020

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. 
ಭದ್ರಾವತಿ, ಜು. ೧೪: ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಂಗಳವಾರ ನಗರದ ರಂಗಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. 
ಆಶಾ ಕಾರ್ಯಕರ್ತೆಯರಿಗೆ ಮಾಸಿಕ ೧೨ ಸಾವಿರ ರು. ಗೌರವ ಧನ, ಕೋವಿಡ್-೧೯ರ ವಿರುದ್ಧ ಹೋರಾಟ ನಡೆಸಲು ಅಗತ್ಯವಿರುವಷ್ಟು ಸುರಕ್ಷತಾ ಸಾಮಗ್ರಿಗಳು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಾರ್ಯಕರ್ತೆಯರು ಆಗ್ರಹಿಸಿದರು. 
ಕಳೆದ ಸುಮಾರು ೧ ತಿಂಗಳಿನಿಂದ ನಿರಂತರವಾಗಿ ತಾಲೂಕು, ಜಿಲ್ಲಾ ಮಟ್ಟದಲ್ಲಿ ಹೋರಾಟ ನಡೆಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಸಹ ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ. ತಕ್ಷಣ ಬೇಡಿಕೆ ಈಡೇರಿಸದಿದ್ದಲ್ಲಿ ಮುಂದಿನ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು. ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. 
ಜಿಲ್ಲಾಧ್ಯಕ್ಷೆ ರಾಜೇಶ್ವರಿ ನಂದೀಶ್, ತಾಲೂಕು ಅಧ್ಯಕ್ಷೆ ಚಂದ್ರಕಲಾ, ಕಾರ್ಯದರ್ಶಿ ಆಶಾ, ಆರ್. ವಾಸಂತಿ, ಎನ್. ಭಾಗ್ಯ, ಎಚ್. ನೇತ್ರಾವತಿ, ಎನ್. ಕಮಲ, ಪಿ. ಶೃತಿ, ಎನ್. ಸೀಮಾ, ಎಸ್. ಗೀತಾಂಜಲಿ, ಹೇಮಾವತಿ, ಆರ್. ಮಂಜುಳ, ಸುಮಿತ್ರ ಬಾಯಿ, ಫಜಲುನ್ನಿಸಾ, ಎಸ್. ಮಮತ, ವಿ. ಅನಿತಾ, ಬಿ. ದೀಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment