Tuesday, July 7, 2020

ಕರ್ನಾಟಕ ಜನಸಂವಾದ ಸಮಾರೋಪ ವೀಕ್ಷಣೆಗೆ ಅವಕಾಶ : ಬಿ.ಎಲ್ ಸಂತೋಷ್ ಭಾಷಣಕ್ಕೆ ಮೆಚ್ಚುಗೆ

ಭದ್ರಾವತಿ ನಗರಸಭೆ ೧೨ನೇ ವಾರ್ಡಿನ ಹೊಸಮನೆ ಮುಖ್ಯ ರಸ್ತೆ ಸಂತೆ ಮೈದಾನದ ಬಳಿ ಸಾರ್ವಜನಿಕರಿಗೆ ರಾಜ್ಯ ಬಿಜೆಪಿ ಘಟಕದ ವತಿಯಿಂದ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಜನಸಂವಾದ ಸಮಾರೋಪದ ನೇರವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. 
ಭದ್ರಾವತಿ, ಜು. ೭: ನಗರಸಭೆ ೧೨ನೇ ವಾರ್ಡಿನ ಹೊಸಮನೆ ಮುಖ್ಯ ರಸ್ತೆ ಸಂತೆ ಮೈದಾನದ ಬಳಿ ಸಾರ್ವಜನಿಕರಿಗೆ ರಾಜ್ಯ ಬಿಜೆಪಿ ಘಟಕದ ವತಿಯಿಂದ ಸೋಮವಾರ ಸಂಜೆ ಹಮ್ಮಿಕೊಳ್ಳಲಾಗಿದ್ದ ಕರ್ನಾಟಕ ಜನಸಂವಾದ ಸಮಾರೋಪದ ನೇರವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿತ್ತು. 
ಸಂಜೆ ಮಳೆ ನಡುವೆಯೂ ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರೊಂದಿಗೆ ಸುಮಾರು ಒಂದೂವರೆ ತಾಸು ವೀಕ್ಷಣೆ ನಡೆಸಿದ ಸಾರ್ವಜನಿಕರು ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರ ಭಾಷಣಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. 
ಪ್ರಮುಖರಾದ ಮಂಗೋಟೆ ರುದ್ರೇಶ್, ಬಿ.ಎಸ್ ಶ್ರೀನಾಥ್, ಮಂಜುನಾಥ್ ಕೊಹ್ಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ತಾಲೂಕಿನ ಪಕ್ಷದ ವಿವಿಧ ಶಕ್ತಿ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು. 

No comments:

Post a Comment