Saturday, July 25, 2020

ವಿಕಲಚೇತನ ಸಂಕಷ್ಟಕ್ಕೆ ಸ್ಪಂದಿಸಿದ ಶ್ರೀ ಚನ್ನವೀರಸ್ವಾಮಿ ಮಠ

ಭದ್ರಾವತಿ ತಾಲೂಕಿನ ಅರಕರೆ ಗ್ರಾಮದ ಶ್ರೀ ಚನ್ನವೀರಸ್ವಾಮಿ ಮಠ ವತಿಯಿಂದ ವಿಕಲಚೇತನ ಬಾಲಕನೊಬ್ಬನಿಗೆ ಗಾಲಿ ಕುರ್ಚಿ ವಿತರಿಸಲಾಯಿತು. 
ಭದ್ರಾವತಿ, ಜು. ೨೫: ತಾಲೂಕಿನ ಅರಕರೆ ಗ್ರಾಮದ ಶ್ರೀ ಚನ್ನವೀರಸ್ವಾಮಿ ಮಠ ವಿಕಲಚೇತನ ಬಾಲಕನೊಬ್ಬನ ಸಂಕಷ್ಟಕ್ಕೆ ಸ್ಪಂದಿಸಿದೆ. 
ಡಿ.ಬಿ ಹಳ್ಳಿ ಗ್ರಾಮದ ತಿಮ್ಮಯ್ಯ ಎಂಬುವರ ಮಗ ಶ್ರೀನಿವಾಸ ಅಂಗ ವೈಕಲ್ಯದಿಂದ ಬಳಲುತ್ತಿದ್ದು, ಈ ಬಾಲಕನ ಸಂಕಷ್ಟಕ್ಕೆ ಸ್ಪಂದಿಸಿ ಅಗತ್ಯವಿರುವ ಗಾಲಿ ಕುರ್ಚಿ ವಿತರಿಸಲಾಯಿತು. 
ಮಠದ ಪೀಠಾಧ್ಯಕ್ಷ ಶ್ರೀ ಕರಿಸಿದ್ದೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಅರಕೆರೆ ಭೈರೇಶ್‌ಕುಮಾರ್ ಹಾಗೂ ಭಕ್ತರು ಉಪಸ್ಥಿತರಿದ್ದರು. 

No comments:

Post a Comment