ಭದ್ರಾವತಿ ಹೊಸಮನೆ ೧೨ನೇ ವಾರ್ಡ್ ಮುತ್ತು ಮಾರಿಯಮ್ಮ ದೇವಸ್ಥಾನ ಸಮೀಪ ಸೀಲ್ಡೌನ್ ಮಾಡಲಾಗಿರುವ ವ್ಯಾಪ್ತಿಯಲ್ಲಿನ ನಿವಾಸಿಗಳಿಗೆ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಸುಮಾರು ೧೦ ದಿನಗಳಿಗೆ ಸಾಕಾಗುವಷ್ಟು ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಭದ್ರಾವತಿ, ಜು. ೪: ನಗರದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಡುವೆ ಸೋಂಕು ಪತ್ತೆಯಾದ ಸ್ಥಳದ ಸುತ್ತಮುತ್ತ ಸೀಲ್ಡೌನ್ ಮಾಡಲಾಗುತ್ತಿದೆ. ಇದರಿಂದಾಗಿ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗುತ್ತಿದೆ.
ಈಗಾಗಲೇ ಕಾಗದನಗರ, ಸುರಗಿತೋಪು, ಹಳೇನಗರ, ಹೊಸಮನೆ, ಗಾಂಧಿನಗರ ಸೇರಿದಂತೆ ಹಲವೆಡೆ ಸೀಲ್ಡೌನ್ ಮಾಡಲಾಗಿದ್ದು, ಸ್ಥಳೀಯರಿಗೆ ನಗರಸಭೆ ಸಿಬ್ಬಂದಿಗಳು ದಿನನಿತ್ಯದ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದಾರೆ.
ಈ ನಡುವೆ ಹೊಸಮನೆ ೧೨ನೇ ವಾರ್ಡ್ ಮುತ್ತು ಮಾರಿಯಮ್ಮ ದೇವಸ್ಥಾನ ಸಮೀಪ ಸೀಲ್ಡೌನ್ ಮಾಡಲಾಗಿರುವ ವ್ಯಾಪ್ತಿಯಲ್ಲಿನ ನಿವಾಸಿಗಳಿಗೆ ಆನಂದ ಸಾಮಾಜಿಕ ಅಭಿವೃದ್ಧಿ ಸಂಸ್ಥೆ ವತಿಯಿಂದ ಶನಿವಾರ ಸುಮಾರು ೧೦ ದಿನಗಳಿಗೆ ಸಾಕಾಗುವಷ್ಟು ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು.
ಸಂಸ್ಥೆಯ ಅಧ್ಯಕ್ಷ, ವಾರ್ಡ್ ಸದಸ್ಯ ಜಿ. ಆನಂದಕುಮಾರ್, ಬಿಜೆಪಿ ಪಕ್ಷದ ಮುಖಂಡರಾದ ಮಂಗೋಟೆ ರುದ್ರೇಶ್, ಮೋಹನ್ ಮತ್ತು ಬಿ.ಎಸ್ ಶ್ರೀನಾಥ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಹೊಸಮನೆ ಹಿಂದೂ ಮಹಾಸಭಾ ವಿನಾಯಕ ಸೇವಾ ಸಮಿತಿ ಸಮೀಪ ಸೀಲ್ಡೌನ್ ಮಾಡಲಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಕುಂದು ಕೊರತೆಗಳನ್ನು ವಿಚಾರಿಸಿದರು.
ಈ ನಡುವೆ ಶಾಸಕ ಬಿ.ಕೆ ಸಂಗಮೇಶ್ವರ್ ನಗರಸಭೆ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರೊಂದಿಗೆ ಹೊಸಮನೆ ಹಿಂದೂ ಮಹಾಸಭಾ ವಿನಾಯಕ ಸೇವಾ ಸಮಿತಿ ಸಮೀಪ ಸೀಲ್ಡೌನ್ ಮಾಡಲಾಗಿರುವ ಪ್ರದೇಶಕ್ಕೆ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಕುಂದು ಕೊರತೆಗಳನ್ನು ವಿಚಾರಿಸಿದರು.
No comments:
Post a Comment