ಭದ್ರಾವತಿ, ಆ.೧ : ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಹಳ ವರ್ಷಗಳಿಂದ ಖಾಲಿ ಉಳಿದಿದ್ದ ಶಸ್ತ್ರ ಚಿಕಿತ್ಸಕರ ಹುದ್ದೆಯನ್ನು ಸರ್ಕಾರ ಭರ್ತಿ ಮಾಡಿದೆ.
೧೦೦ ಹಾಸಿಗೆಯುಳ್ಳ ತಾಲೂಕಿನ ಏಕೈಕ ಸರ್ಕಾರಿ ಆಸ್ಪತ್ರೆಗೆ ಪ್ರತಿದಿನ ಸಾವಿರಾರು ಮಂದಿ ರೋಗಿಗಳು ಬಂದು ಹೋಗುತ್ತಾರೆ. ಕಡು ಬಡವರು, ಸಾಮಾನ್ಯ ವರ್ಗದವರು ಹೆಚ್ಚಾಗಿ ಬರುವ ಆಸ್ಪತ್ರೆಯಲ್ಲಿ ಹಲವು ಹುದ್ದೆಗಳು ಖಾಲಿ ಇದ್ದು, ಪ್ರಸ್ತುತ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಸಿಬ್ಬಂದಿಗಳು ಒತ್ತಡದಲ್ಲಿ ಕರ್ತವ್ಯ ನಿರ್ವಹಿಸಬೇಕಾದ ಅನಿವಾರ್ಯತೆ ನಿರ್ಮಾಣವಾಗಿದೆ. ಈ ನಡುವೆ ಅತಿ ಮುಖ್ಯವಾಗಿ ಆಸ್ಪತ್ರೆಗೆ ಶಸ್ತ್ರ ಚಿಕಿತ್ಸಕರನ್ನು ನೇಮಕಗೊಳಿಸುವಂತೆ ಸರ್ಕಾರಕ್ಕೆ ಒತ್ತಾಯಿಸಲಾಗಿತ್ತು.
ಇದೀಗ ಸರ್ಕಾರ ಜು.೩೦ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ. ಡಿ.ಎಸ್ ಶಿವಪ್ರಕಾಶ್ರವರನ್ನು ವರ್ಗಾವಣೆಗೊಳಿಸಿ ಖಾಲಿ ಹುದ್ದೆಯನ್ನು ಭರ್ತಿ ಮಾಡಿದೆ.
No comments:
Post a Comment