Saturday, August 1, 2020

ಈ ಬಾರಿ ಸಹ ಹಿಂದೂ ಮಹಾಸಭಾ ಗಣಪತಿ ಪ್ರತಿಷ್ಠಾಪನೆ

ಮೆರವಣಿಗೆ ಸೇರಿ ಯಾವುದೇ ಆಡಂಬರವಿಲ್ಲ, ೯ನೇ ದಿನ ಪ್ರತಿಷ್ಠಾಪನೆ : ವಿ. ಕದಿರೇಶ್ 

ಭದ್ರಾವತಿ, ಆ. ೧: ಪ್ರತಿಷ್ಠಿತ ಹಿಂದೂಪರ ಸಂಘಟನೆಗಳಲ್ಲಿ ಒಂದಾಗಿರುವ ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಈ ಬಾರಿ ಸಹ ವಿನಾಯಕ ಚತುರ್ಥಿ ಅಂಗವಾಗಿ ವಿನಾಯಕ ಮೂರ್ತಿ ಪ್ರತಿಷ್ಠಾಪನೆ ಮಾಡಲಿದೆ ಎಂದು ಸಮಿತಿ ಅಧ್ಯಕ್ಷ, ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್ ತಿಳಿಸಿದರು.
ಅವರು ಸಮಿತಿಯ ಸರ್ವ ಸದಸ್ಯರ ಹಾಗೂ ಪದಾಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. ಕೊರೋನಾ ಸೋಂಕು ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಸಂಪ್ರದಾಯದಂತೆ ಸಮಿತಿ ವತಿಯಿಂದ ಈ ಬಾರಿ ಸಹ ಸರ್ಕಾರದ ನಿಯಮಗಳನ್ನು ಪಾಲಿಸಿ  ವಿನಾಯಕ ಮೂರ್ತಿಯನ್ನು ಪ್ರತಿಷ್ಠಾಪಿಸಿ ಯಾವುದೇ ಆಡಂಬರವಿಲ್ಲದೆ ಸರಳವಾಗಿ ವಿನಾಯಕ ಚತುರ್ಥಿ ಆಚರಿಸಲಾಗುವುದು ಎಂದರು. 
ಶಿವಮೊಗ್ಗ ಮಾದರಿಯಂತೆ ೯ ದಿನಗಳ ಕಾಲ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗುವುದು. ತಾಲೂಕು ಆಡಳಿತ, ನಗರಸಭೆ ಮತ್ತು ಪೊಲೀಸ್ ಇಲಾಖೆ ನೀಡುವ ಸಲಹೆ, ಸೂಚನೆಗಳನ್ನು ಪಾಲಿಸಲಾಗುವುದು. ಈ ಬಾರಿ ಮೆರವಣಿಗೆಯನ್ನು ರದ್ದುಪಡಿಸಲಾಗಿದ್ದು, ಸರಳವಾಗಿ ವಿಸರ್ಜನಾ ಕಾರ್ಯಕ್ರಮ ನಡೆಯಲಿದೆ. ವಿವಿಧ ಸಂಘ-ಸಂಸ್ಥೆಗಳು, ರಾಜಕೀಯ ಪಕ್ಷಗಳು, ಜನಪ್ರತಿನಿಧಿಗಳು, ಸರ್ಕಾರದ ಇಲಾಖೆ ಸೇರಿದಂತೆ ಸಮಸ್ತ ನಾಗರಿಕರು ಸಹಕರಿಸಬೇಕೆಂದು ಮನವಿ ಮಾಡಿದರು. 

No comments:

Post a Comment