Thursday, August 6, 2020

ಕವನ ಸ್ಪರ್ಧೆಯಲ್ಲಿ ಎಚ್.ಆರ್ ಶ್ರೀಧರೇಶ್ ಭಾರದ್ವಾಜ್‌ಗೆ ಪ್ರಥಮ ಸ್ಥಾನ

ಭದ್ರಾವತಿ, ಆ. ೬: ಚಿತ್ರದುರ್ಗ ಹಿರಿಯೂರು ತಾಲೂಕಿನ ವಿಶ್ವ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಂಸ್ಥೆ ಕೇಂದ್ರ ಘಟಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯಮಟ್ಟದ ಅಂತರ್ಜಾಲ ಕವನ ಸ್ಪರ್ಧೆಯಲ್ಲಿ ನಗರದ ನ್ಯೂಟೌನ್ ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್‌ನ ಪ್ರಾಧ್ಯಾಪಕ ಎಚ್.ಆರ್. ಶ್ರೀಧರೇಶ್ ಭಾರದ್ವಾಜ್ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 
ಶ್ರಾವಣ ಮಾಸದ ತುಂತುರು ಹನಿಗಳ ಸಂಗಮ ಎಂಬ ವಿಷಯದಡಿ ಪುರುಷರ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವನ ಸ್ಪರ್ಧೆಯಲ್ಲಿ ಭಾರದ್ವಾಜ್‌ರವರು ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. 
ಉಳಿದಂತೆ ಶ್ರಾವಣ ಸಿರಿ ಎಂಬ ವಿಷಯದಡಿ ಮಹಿಳಾ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕವನ ಸ್ಪರ್ಧೆಯಲ್ಲಿ ನಗರದ ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಎಚ್.ಆರ್ ಸುಧಾ ಸಮಾಧಾನಕರ ಬಹುಮಾನ ಪಡೆದುಕೊಂಡಿದ್ದಾರೆ. 

No comments:

Post a Comment