Monday, August 31, 2020

ಪೌರಕಾರ್ಮಿಕರ ದಿನಾಚರಣೆಯಲ್ಲಿ ಜಾನಪದ ಕಲಾವಿದರಿಗೆ ವೇದಿಕೆ ನೀಡಲು ಮನವಿ

 ಪೌರಕಾರ್ಮಿಕರ ದಿನಾಚರಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಕಲಾವಿದರಿಗೆ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸೋಮವಾರ ಭದ್ರಾವತಿ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಆ. ೩೧: ಪ್ರತಿ ವರ್ಷ ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗುವ ಪೌರಕಾರ್ಮಿಕರ ದಿನಾಚರಣೆಯಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಾನಪದ ಕಲಾ ಸಂಘದ ಕಲಾವಿದರಿಗೆ ವೇದಿಕೆಯಲ್ಲಿ ಅವಕಾಶ ಕಲ್ಪಿಸಿಕೊಡಬೇಕೆಂದು ಒತ್ತಾಯಿಸಿ ಸೋಮವಾರ ನಗರಸಭೆ ಪೌರಾಯುಕ್ತ ಮನೋಹರ್‌ಗೆ ಮನವಿ ಸಲ್ಲಿಸಲಾಯಿತು.
      ಸ್ವಚ್ಛತೆ ಹಾಗು ಕಾರ್ಮಿಕರಿಗೆ ಸಂಬಂಧಿಸಿದ ಮತ್ತು ಅಂಬೇಡ್ಕರ್‌ರವರ ಕುರಿತು ಹಾಡುಗಳನ್ನು ಹಾಡಲು ಕಲಾವಿದರಿಗೆ ಅವಕಾಶ ನೀಡುವಂತೆ  ಮನವಿಯಲ್ಲಿ ಕೋರಲಾಗಿದೆ.
      ಕಲಾವಿದರಾದ ತಮಟೆ ಜಗದೀಶ್, ಜಿ. ದಿವಾಕರ, ಲಾವಣ್ಯ ಮತ್ತು ಶಿವಾನಂದ ಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment