ಕಬಳಿಕೆ ಯತ್ನ ತಪ್ಪಿಸಿದ ಶಾಸಕ ಬಿ.ಕೆ ಸಂಗಮೇಶ್ವರ್
ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಹುಣಸೇಕಟ್ಟೆ ಗ್ರಾಮದ ಬಿ.ಕೆ ಸಂಗಮೇಶ್ವರ್ ಬಡಾವಣೆಯ ಸರ್ವೆ ನಂ.೮ ಮತ್ತು ೧೪ರಲ್ಲಿ ಪಾಳುಬಿದ್ದಿದ್ದ ಶ್ರೀ ರಾಮ ಮಂದಿರಕ್ಕೆ ಸುಣ್ಣಬಣ್ಣ ಬಳಿದು ಬಾಳೆದಿಂಡು, ಮಾವಿನ ಎಲೆ ಹಸಿರು ತೋರಣಗಳಿಂದ ಶೃಂಗಾರಗೊಳಿಸುತ್ತಿರುವುದು.
ಭದ್ರಾವತಿ: ಸುಮಾರು ೭ ದಶಕಗಳ ಇತಿಹಾಸವಿದ್ದು, ಪಾಳುಬಿದ್ದಿದ್ದ ಶ್ರೀ ರಾಮಮಂದಿರವೊಂದು ಆಯೋಧ್ಯೆ ರಾಮಮಂದಿರ ಶಿಲಾನ್ಯಾಸದಂದು ಪುನಃ ಭಕ್ತರ ಆರಾಧನೆಗೆ ಮುಕ್ತಗೊಂಡಿರುವ ಘಟನೆ ನಡೆದಿದೆ.
ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಹುಣಸೇಕಟ್ಟೆ ಗ್ರಾಮದ ಬಿ.ಕೆ ಸಂಗಮೇಶ್ವರ್ ಬಡಾವಣೆಯ ಸರ್ವೆ ನಂ.೮ ಮತ್ತು ೧೪ರಲ್ಲಿ ಶ್ರೀ ರಾಮ ಮಂದಿರವಿದ್ದು, ಹಲವಾರು ವರ್ಷಗಳಿಂದ ಈ ಮಂದಿರ ಪಾಳು ಬಿದ್ದಿತ್ತು. ಈ ನಡುವೆ ಮಂದಿರದ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಳ್ಳಲು ಯತ್ನಿಸುತ್ತಿದ್ದರು. ಈ ವಿಚಾರವನ್ನು ಸ್ಥಳೀಯ ಮುಖಂಡರು, ಗ್ರಾಮಸ್ಥರು ಶಾಸಕ ಬಿ.ಕೆ ಸಂಗಮೇಶ್ವರ್ ಗಮನಕ್ಕೆ ತಂದಿದ್ದರು.
ಶಾಸಕರು ಒತ್ತುವರಿ ಯತ್ನವನ್ನು ತಡೆದು ಜಾಗವನ್ನು ರಾಮಮಂದಿರದ ಅಧೀನದಲ್ಲಿ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈ ಹಿನ್ನಲೆಯಲ್ಲಿ ರಾಮಮಂದಿರಕ್ಕೆ ಸುಣ್ಣಬಣ್ಣ ಬಳಿದು ಆಯೋಧ್ಯೆ ಶ್ರೀ ರಾಮ ಮಂದಿರ ಶಿಲಾನ್ಯಾಸದಂದು ವಿಶೇಷವಾಗಿ ಪೂಜೆ ಸಲ್ಲಿಸುವ ಮೂಲಕ ಭಕ್ತರ ಆರಾಧನೆಗೆ ಮುಕ್ತಗೊಳಿಸಲಾಯಿತು.
ಭದ್ರಾವತಿ ತಾಲೂಕಿನ ಕಂಬದಾಳು ಹೊಸೂರು ಗ್ರಾಮ ಪಂಚಾಯಿತಿ ಹುಣಸೇಕಟ್ಟೆ ಗ್ರಾಮದ ಬಿ.ಕೆ ಸಂಗಮೇಶ್ವರ್ ಬಡಾವಣೆಯ ಸರ್ವೆ ನಂ.೮ ಮತ್ತು ೧೪ರಲ್ಲಿ ಪಾಳುಬಿದ್ದಿದ್ದ ಶ್ರೀ ರಾಮ ಮಂದಿರದಲ್ಲಿ ಆಯೋಧ್ಯೆ ರಾಮಮಂದಿರ ಶಿಲಾನ್ಯಾಸದಂದು ವಿಶೇಷ ಪೂಜೆ ಸಲ್ಲಿಸಿ ಭಕ್ತರ ಆರಾಧನೆಗೆ ಮುಕ್ತಗೊಳಿಸಲಾಯಿತು.
ಅಲ್ಲದೆ ಕೊರೋನಾ ಸೋಂಕಿಗೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವಾಗಿ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸುನಿತಾ ನಂಬಿಯಾರ್, ಪಿಎಲ್ಡಿ ಬ್ಯಾಂಕ್ ನಿರ್ದೇಶಕ ವಿರೂಪಾಕ್ಷಪ್ಪ ಸೇರಿದಂತೆ ಇನ್ನಿತರ ಮುಖಂಡರು, ಗ್ರಾಮಸ್ಥರು ಪಾಲ್ಗೊಂಡಿದ್ದರು.
No comments:
Post a Comment