Tuesday, August 11, 2020

ಶಿವಾಜಿ ಮಹಾರಾಜರ ಪುತ್ಥಳಿ ತೆರವು : ಖಂಡನೆ

ಭದ್ರಾವತಿ, ಆ. ೧೧: ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶಿವಾಜಿ ಮಹಾರಾಜರ ಪುತ್ಥಳಿ ತೆರವುಗೊಳಿಸಿರುವುದನ್ನು ನಗರದ ಶ್ರೀ ಛತ್ರಪತಿ ಶಿವಾಜಿ ಸೇವಾ ಸಂಘ ಖಂಡಿಸಿದೆ.
    ಮಣಗುತ್ತಿ ಗ್ರಾಮದಲ್ಲಿ ಶ್ರೀ ಛತ್ರಪತಿ ಶಿವಾಜಿ ಬ್ರಿಗೇಡ್ ಯುವಕರ ಸಂಘದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ ಶಿವಾಜಿ ಮಹಾರಾಜರ ಪುತ್ಥಳಿಯನ್ನು ತೆರವುಗೊಳಿಸಿರುವುದು ಒಬ್ಬ ದಕ್ಷ ಆಡಳಿತಗಾರ, ಸಮಾಜ ಸುಧಾರಕ, ಆದರ್ಶ ವ್ಯಕ್ತಿಗೆ ಮಾಡಿರುವ ಅವಮಾನವಾಗಿದೆ.
      ಶಿವಾಜಿ ಮಹಾರಾಜರು ಕೇವಲ ಮರಾಠ ಸಮಾಜಕ್ಕೆ ಸೀಮಿತವಲ್ಲ. ಇಡೀ ಭರತ ಖಂಡದ ಒಬ್ಬ ಮಹಾನ್ ಪುರುಷ, ವಿಶ್ವದಲ್ಲೇ ಅತ್ಯಂತ ದಕ್ಷ ಆಡಳಿತಗಾರ, ಎಲ್ಲಾ ಧರ್ಮದವರನ್ನು ಪ್ರೀತಿಸುವ ಆದರ್ಶ ವ್ಯಕ್ತಿಯಾಗಿ ಗುರುತಿಸಲ್ಪಟ್ಟಿದ್ದಾರೆ. ಇವರ ಪುತ್ಥಳಿಯನ್ನು ತೆರವುಗೊಳಿಸಿರುವುದು ಖಂಡನೀಯ ತಕ್ಷಣ ಅದೇ ಸ್ಥಳದಲ್ಲಿ ಪುಸ್ಥಳಿಯನ್ನು ಪ್ರತಿಷ್ಠಾಪಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಜಿಲ್ಲಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಸಂಘದ ಅಧ್ಯಕ್ಷ ಯಶವಂತರಾವ್ ಘೋರ್ಪಡೆ ಎಚ್ಚರಿಸಿದ್ದಾರೆ.


No comments:

Post a Comment