ಭದ್ರಾವತಿ ತಾಲೂಕಿನ ಅನವೇರಿ ಗ್ರಾಮ ಪಂಚಾಯಿತಿ ಡಿಇಓ ಪ್ರದೀಪ್ರವರು ನಿಧನ ಹೊಂದಿದ್ದು, ಸಂಕಷ್ಟದಲ್ಲಿರುವ ಮೃತರ ಕುಟುಂಬಕ್ಕೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಾಯಾಸ್ತ ನೀಡುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.
ಭದ್ರಾವತಿ, ಆ. ೭: ಅನವೇರಿ ಗ್ರಾಮ ಪಂಚಾಯಿತಿ ಡಿಇಓ ಪ್ರದೀಪ್ರವರು ನಿಧನ ಹೊಂದಿದ್ದು, ಸಂಕಷ್ಟದಲ್ಲಿರುವ ಮೃತರ ಕುಟುಂಬಕ್ಕೆ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹಾಯಾಸ್ತ ನೀಡುವ ಮೂಲಕ ಸಂಕಷ್ಟಕ್ಕೆ ಸ್ಪಂದಿಸಿದ್ದಾರೆ.
ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮೃತರ ಪುತ್ರಿ ಮತ್ತು ಪತ್ನಿ ಹೆಸರಿನಲ್ಲಿ ಜಂಟಿಯಾಗಿ ೧,೫೦,೦೦೦ ರು. ಮೌಲ್ಯದ ಸಹಾಯಾಸ್ತದ ಬಾಂಡ್ ವಿತರಣೆ ಮಾಡಲಾಯಿತು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಪಂಚಾಯಿತಿ ಸಿ.ಎ.ಓ ಪುರಾಣಿಕ್, ಸಹಾಯಕ ನಿರ್ದೇಶಕ ಸಂತೋಷ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
Good work
ಪ್ರತ್ಯುತ್ತರಅಳಿಸಿ