Tuesday, August 4, 2020

ಆಯೋಧ್ಯೆ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ನಗರದಲ್ಲಿ ಸಂಭ್ರಮಾಚರಣೆಗೆ ಸಿದ್ದತೆ

ಭದ್ರಾವತಿ, ಆ. ೫: ದೇಶದ ಬಹುಸಂಖ್ಯಾತರ ಬಹಳ ವರ್ಷಗಳ ಕನಸು ಶ್ರೀರಾಮ ಜನ್ಮಭೂಮಿ ಆಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ನನಸಾಗುತ್ತಿರುವ ಹಿನ್ನಲೆಯಲ್ಲಿ ನಗರದ ವಿವಿಧ ಹಿಂದೂಪರ ಸಂಘಟನೆಗಳಿಂದ ಆ.೫ರಂದು ಸಂಭ್ರಮಾಚರಣೆಗೆ ಸಿದ್ದತೆಗಳು ನಡೆದಿವೆ. 
ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರಿಂದ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರುತ್ತಿರುವುದು ದೇಶದ ಇತಿಹಾಸದ ಸಂಭ್ರಮದ ದಿನವಾಗಿದ್ದು, ಈ ಹಿನ್ನಲೆಯಲ್ಲಿ ನಗರದ ಹೊಸ ಸೇತುವೆ ಬಳಿ ಸಿಹಿ ಹಂಚಿಕೆ ಕಾರ್ಯಕ್ರಮ ಬಿಜೆಪಿ ಪಕ್ಷದ ತಾಲೂಕು ಎಸ್.ಸಿ ಮೋರ್ಚಾ ವತಿಯಿಂದ ಹಮ್ಮಿಕೊಳ್ಳಲಾಗಿದೆ. 
ಕರ ಸೇವಕರಿಗೆ ಸನ್ಮಾನ : 
೧೯೯೨ರಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಾಂತ ಉಪಾಧ್ಯಕ್ಷ ಹಾ. ರಾಮಪ್ಪ ನೇತೃತ್ವದಲ್ಲಿ ಸುಮಾರು ೮೮ ಕರಸೇವಕರು ಆಯೋಧ್ಯೆಗೆ ತೆರಳಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದರು. ಈ ಹಿನ್ನಲೆಯಲ್ಲಿ ಕರಸೇವಕರ ತಂಡದ ಶ್ರಮ ಸಾರ್ಥಕತೆ ಮಿಲನ ಹಾಗೂ ರಕ್ಷಾ ಬಂಧನ ಕಾರ್ಯಕ್ರಮವನ್ನು ವಿಶ್ವ ಹಿಂದೂ ಪರಿಷತ್ ತಾಲೂಕು ಶಾಖೆ ವತಿಯಿಂದ ಬೆಳಿಗ್ಗೆ ೧೦ ಗಂಟೆಗೆ ಸಿದ್ದರೂಢನಗರದ ಧರ್ಮಶ್ರೀ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. 
ಬಜರಂಗದಳದಿಂದ ೩ ಸಾವಿರ ಲಾಡು ವಿತರಣೆ: 
ರಾಮಮಂದಿರ ನಿರ್ಮಾಣ ಭೂಮಿ ಪೂಜೆ ಹಿನ್ನಲೆಯಲ್ಲಿ ನಗರದಲ್ಲಿ ಬಜರಂಗದಳ ವತಿಯಿಂದ ಸಾರ್ವಜನಿಕರಿಗೆ ೩ ಸಾವಿರ ಲಾಡು ವಿತರಿಸಲು ವ್ಯವಸ್ಥೆ ಕೈಗೊಳ್ಳಲಾಗಿದೆ. 

No comments:

Post a Comment