ಭದ್ರಾವತಿ, ಆ. ೧೯: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹಿಂದುವರ್ಗಗಳ ನೇತಾರ, ಮಾಜಿ ಮುಖ್ಯಮಂತ್ರಿ, ಡಿ. ದೇವರಾಜ ಅರಸು ೧೦೫ನೇ ಜನ್ಮ ದಿನಾಚರಣೆ ಆ.೨೦ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕು ಕಛೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕೋವಿಡ್-೧೯ರ ಹಿನ್ನಲೆಯಲ್ಲಿ ಹಿಂದುಳಿದ ವರ್ಗಗಳ ಇಲಾಖೆ ಆಯುಕ್ತರ ಆದೇಶದಂತೆ ಅರಸು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯೊಂದಿಗೆ ಕಾರ್ಯಕ್ರಮ ಸರಳವಾಗಿ ನಡೆಯಲಿದೆ ಎಂದು ತಹಸಿಲ್ದಾರ್ ಎಚ್.ಸಿ ಶಿವಕುಮಾರ್ ತಿಳಿಸಿದ್ದಾರೆ.
No comments:
Post a Comment