ಭದ್ರಾವತಿ, ಆ. ೪: ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ರಾತ್ರಿ ವೇಳೆ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ನೌಕರನೊಬ್ಬನ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಡೆದಿದೆ.
ಸುಮಾರು ೨೩ ವರ್ಷದ ಶಿವಮೊಗ್ಗ ವಿನೋಬನಗರ ನಿವಾಸಿ ಕೆ.ಪಿ ಪ್ರತೀಕ್ ಮಾಚೇನಹಳ್ಳಿಯಲ್ಲಿರುವ ಶಾಂತಲ ಸ್ಟೀರೋ ಕಾಸ್ಟಾ ಪ್ರೈವೇಟ್ ಲಿಮಿಟೆಡ್ನಲ್ಲಿ ಮಿಷನ್ ಆಪರೇಟರ್ ಕೆಲಸ ಮಾಡುತ್ತಿದ್ದು, ಆ.೧ರ ರಾತ್ರಿ ಎರಡನೇ ಪಾಳಿ ಅಂದರೆ ಮಧ್ಯಾಹ್ನ ೩ ಗಂಟೆಯಿಂದ ರಾತ್ರಿ ೧೧ ಗಂಟೆ ವರೆಗೆ ಕೆಲಸ ನಿರ್ವಹಿಸಿ ಮನೆಗೆ ತೆರಳುತ್ತಿದ್ದಾಗ ಕೈಗಾರಿಕಾ ಪ್ರದೇಶದ ಮುಖ್ಯ ರಸ್ತೆಯಲ್ಲಿರುವ ಕೆಇಬಿ ಕಛೇರಿ ಬಳಿ ೪ ಮಂದಿ ಅಪರಿಚಿತ ವ್ಯಕ್ತಿಗಳು ಈತನ ಕುತ್ತಿಗೆಯಲ್ಲಿದ್ದ ಸುಮಾರು ೧೬ ಗ್ರಾಂ ತೂಕದ ಸುಮಾರು ೩೩ ಸಾವಿರ ರು. ಮೌಲ್ಯದ ಬಂಗಾರದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಆ.೩ರ ಸೋಮವಾರ ದೂರು ನೀಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
No comments:
Post a Comment