Friday, August 7, 2020

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲು ಪ್ರಾರ್ಥಿಸಿ ರುದ್ರಾಭಿಷೇಕ

ಭದ್ರಾವತಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶೀಘ್ರವಾಗಿ ಗುಣಮುಖರಾಗಲೆಂದು ಪ್ರಾರ್ಥಿಸಿ ಗ್ರಾಮದೇವತೆ ಶ್ರೀ ಹಳದಮ್ಮ ದೇವಿಗೆ ರುದ್ರಾಭಿಷೇಕ ನೆರವೇರಿಸಲಾಯಿತು. 

ಭದ್ರಾವತಿ, ಆ. ೭: ಕೊರೋನಾ ಸೋಂಕಿಗೆ ಒಳಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿ ಶುಕ್ರವಾರ ಹಳೇನಗರದ ಗ್ರಾಮದೇವತೆ ಶ್ರೀ ಹಳದಮ್ಮ ದೇವಿಗೆ ತಾಲೂಕು ಕನಕ ಯುವ ಪಡೆ ವತಿಯಿಂದ ರುದ್ರಾಭಿಷೇಕ ನೆರವೇರಿಸಲಾಯಿತು. 

ಕನಕ ಯುವಪಡೆ ಅಧ್ಯಕ್ಷ ಜೆ. ಕುಮಾರ್, ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಯುವ  ಕಾಂಗ್ರೆಸ್ ಅಧ್ಯಕ್ಷ ಜಿ. ವಿನೋದ್‌ಕುಮಾರ್, ಲೋಕೇಶ್, ನವೀನ್, ರಾಜೇಶ್, ಕೇಶವ, ಗೋಪಾಲಕೃಷ್ಣ, ಮಧು, ಶರತ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

No comments:

Post a Comment