Sunday, August 9, 2020

ಸಮಾಜ ಸೇವಕ ರೋಸಯ್ಯ ನಿಧನ

ರೋಸಯ್ಯ
ಭದ್ರಾವತಿ, ಆ. ೯: ಜನ್ನಾಪುರ ಎನ್‌ಟಿಬಿ ಲೇಔಟ್ ನಿವಾಸಿ, ಕ್ರೈಸ್ತ ಸಮಾಜದ ಮುಖಂಡ ರೋಸಯ್ಯ (೬೯) ನಿಧನ ಹೊಂದಿದರು.
ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಸೇರಿದಂತೆ ಬಂಧು-ಬಳಗ ಬಿಟ್ಟಗಲಿದ್ದಾರೆ. ರೋಸಯ್ಯ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವ ಜೊತೆಗೆ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು.
ಮೃತರ ಅಂತ್ಯಕ್ರಿಯೆ ಭಾನುವಾರ ಮಿಲ್ಟ್ರಿಕ್ಯಾಂಪ್ ಸಮೀಪ ಬೈಪಾಸ್ ರಸ್ತೆಯಲ್ಲಿರುವ ಕ್ರೈಸ್ತರ ಸಮಾಧಿ ಭೂಮಿಯಲ್ಲಿ ನೆರವೇರಿತು. ನಗರದ ವಿವಿಧ ಸಂಘಟನೆಗಳ ಪ್ರಮುಖರು, ಗಣ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment