Friday, August 7, 2020

ತಾಲೂಕಿನ ವಿವಿಧೆಡೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ನೇತೃತ್ವ ತಂಡ ಪರಿಶೀಲನೆ

ಭದ್ರಾವತಿ ನಗರದ ಹೃದಯ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಳಿ ಇರುವ ಹೊಸ ಸೇತುವೆಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮಣಿವಣ್ಣನ್ ನೇತೃತ್ವ ತಂಡ ಪರಿಶೀಲನೆ ನಡೆಸಿತು. 

ಭದ್ರಾವತಿ, ಆ. ೭: ತಾಲೂಕಿನ ವಿವಿಧೆಡೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಹಿರಿಯ ಐಎಎಸ್ ಅಧಿಕಾರಿ ಮಣಿವಣ್ಣನ್ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. 

ಮಳೆಗಾಲದಲ್ಲಿ ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ನಗರದ ಹೃದಯ ಭಾಗದಲ್ಲಿ ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ ಬಳಿ ಇರುವ ಹೊಸ ಸೇತುವೆ ಸಂಪೂರ್ಣವಾಗಿ ಮುಳುಗಡೆಗೊಳ್ಳುತ್ತಿದ್ದು, ಅಲ್ಲದೆ ಪ್ರತಿ ಬಾರಿ ಸೇತುವೆ ಹಾನಿಗೊಳಗಾಗುತ್ತಿದೆ. ಈ ಹಿನ್ನಲೆಯಲ್ಲಿ ಮಣಿವಣ್ಣನ್ ತಂಡ ಸೇತುವೆ ಪರಿಶೀಲನೆ ನಡೆಸಿತು. 

ತಹಸೀಲ್ದಾರ್ ಎಚ್.ಸಿ ಶಿವಕುಮಾರ್ ಹಾಗೂ ಪೌರಾಯುಕ್ತ ಮನೋಹರ್ ಸೇತುವೆಯಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ವಿವರಿಸಿದರು. 

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ಭದ್ರಾವತಿ ತಾಲೂಕಿನ ಬಿಆರ್‌ಪಿಯಲ್ಲಿರುವ ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್ ವೈಶಾಲಿ, ಕಂದಾಯಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. 

ಭದ್ರಾ ಜಲಾಶಯಕ್ಕೆ ಜಿಲ್ಲಾಧಿಕಾರಿ ತಂಡ ಭೇಟಿ: 

ಜಿಲ್ಲಾಧಿಕಾರಿ ಕೆ.ಬಿ ಶಿವಕುಮಾರ್ ನೇತೃತ್ವದ ತಂಡ ತಾಲೂಕಿನ ಬಿಆರ್‌ಪಿಯಲ್ಲಿರುವ ಭದ್ರಾ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು. ಜಲಾಶಯದ ಅಧಿಕಾರಿಗಳು ಪ್ರಸ್ತುತ ಜಲಾಶಯದಲ್ಲಿ ಭರ್ತಿಯಾಗಿರುವ ನೀರಿನ ಪ್ರಮಾಣ, ಒಳ ಹಾಗೂ ಹೊರ ಹರಿವು ಮತ್ತು ಜಲಾಶಯದಿಂದ ನದಿಗೆ ನೀರು ಬಿಟ್ಟ ಸಂದರ್ಭದಲ್ಲಿ ಪ್ರವಾಹಕ್ಕೆ ಒಳಗಾಗುವ ಪ್ರದೇಶಗಳ ಮಾಹಿತಿಗಳನ್ನು ನೀಡಿದರು. 

No comments:

Post a Comment