ಭದ್ರಾವತಿ, ಆ. ೩೦: ಪರಿಶಿಷ್ಟ ಜಾತಿಗೆ ಸೇರಿದ ಎಸ್. ಮೂರ್ತಿಯವರನ್ನು ಪುನಃ ವಿಧಾನಸಭೆ ಕಾರ್ಯದರ್ಶಿ ಸೇವೆಗೆ ನೇಮಕ ಮಾಡಿಕೊಳ್ಳುವಂತೆ ತಾಲೂಕು ಬಾಪೂಜಿ ಹರಿಜನ ಸೇವಾ ಸಂಘ ಆಗ್ರಹಿಸಿದೆ.
ಪರಿಶಿಷ್ಟ ಜಾತಿಗೆ ಸೇರಿದ ಎಸ್. ಮೂರ್ತಿಯವರನ್ನು ಪ್ರಮುಖ ಹುದ್ದೆಯಿಂದ ಹೊರಗಿಡುವ ಹುನ್ನಾರ ನಡೆಸಲಾಗಿದ್ದು, ಕಾರ್ಯದರ್ಶಿ ಹುದ್ದೆಯಲ್ಲಿದ್ದ ಮೂರ್ತಿಯವರ ಮೇಲೆ ವಿನಾಕಾರಣ ಕರ್ತವ್ಯಲೋಪ ಆರೋಪ ಮಾಡಿ ೨೦೧೮ರಲ್ಲಿ ಸೇವೆಯಿಂದ ಅಮಾನತು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಕರ್ನಾಟಕ ಉಚ್ಛ ನ್ಯಾಯಾಲಯದಲ್ಲಿ ರಿಟ್ ಪಿಟೀಷನ್ ಹಾಕಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಪಿ.ಬಿ. ಭಜಂತ್ರಿಯವರು ೩ ವಾರಗಳೊಗಾಗಿ ಕಾರ್ಯದರ್ಶಿ ಹುದ್ದೆಗೆ ಮರು ನೇಮಕ ಮಾಡಿಕೊಳ್ಳುವಂತೆ ಜು.೨ರಂದು ತೀರ್ಪು ನೀಡಿದ್ದಾರೆ. ಈ ಆದೇಶವನ್ನು ಪಾಲಿಸದೆ ತೀರ್ಪನ್ನು ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಲಾಗಿದ್ದು, ಇದನ್ನು ಸಂಘವು ಖಂಡಿಸುತ್ತದೆ.
ತಕ್ಷಣ ಸರ್ಕಾರ ನ್ಯಾಯಾಲಯದ ಆದೇಶದಂತೆ ಮೂರ್ತಿಯವರನ್ನು ಮರು ನೇಮಕ ಮಾಡಿಕೊಳ್ಳಬೇಕು. ದಲಿತ ವಿರೋಧಿ ನೀತಿಯನ್ನು ಕೈಬಿಡಬೇಕು. ಇಲ್ಲವಾದಲ್ಲಿ ಮುಖ್ಯಮಂತ್ರಿ, ಕಾನೂನು ಸಚಿವರು ಹಾಗು ಸಭಾಧ್ಯಕ್ಷರ ನಿವಾಸದ ಮುಂದೆ ಬೃಹತ್ ಹೋರಾಟ ನಡೆಸುವುದಾಗಿ ಸಂಘ ಎಚ್ಚರಿಸಿದೆ ಎಂದು ಪ್ರಧಾನ ಕಾರ್ಯದರ್ಶಿ ಎಂ. ರಾಜೇಂದ್ರ ತಿಳಿಸಿದ್ದಾರೆ.
No comments:
Post a Comment