Thursday, August 6, 2020

ದೇಶಭಕ್ತಿ ಗೀತೆ ಸ್ಪರ್ಧೆ : ವಿಜೇತರ ಆಯ್ಕೆ


ಭದ್ರಾವತಿ, ಆ. ೬: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆನ್‌ಲೈನ್ ಮುಖಾಂತರ ಹಮ್ಮಿಕೊಳ್ಳಲಾಗಿದ್ದ ದೇಶಭಕ್ತಿ ಗೀತೆಗಳ ಸ್ಪರ್ಧೆಯ ವಿಜೇತರನ್ನು ಆಯ್ಕೆ ಮಾಡಲಾಗಿದೆ. 
ಜ್ಯೂನಿಯರ್ ವಿಭಾಗದಲ್ಲಿ ನಗರದ ಚಂದನ ಪ್ರಥಮ ಸ್ಥಾನ, ಅಕ್ಷರಿಕೆ ದ್ವಿತೀಯ ಸ್ಥಾನ ಮತ್ತು ಶಿವಮೊಗ್ಗದ ಜಿ. ಸಾನ್ವಿ ತೃತೀಯ ಸ್ಥಾನ ಪಡೆದುಕೊಂಡಿದ್ದು, ಸೀನಿಯರ್ ವಿಭಾಗದಲ್ಲಿ ಶರಾವತಿ ಪ್ರಥಮ ಸ್ಥಾನ, ಸಿ.ಎಸ್ ಆನಗ ದ್ವಿತೀಯ ಸ್ಥಾನ ಹಾಗೂ ಶಿವಮೊಗ್ಗದ ಗಾಯತ್ರಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ವಿಜೇತರನ್ನು ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿದ್ದಾರೆ. 

No comments:

Post a Comment