Saturday, September 12, 2020

ಸೆ.೧೪ರಂದು ಪ್ರತಿಭಟನೆ

ಭದ್ರಾವತಿ, ಸೆ. ೧೨: ಸಾಮಾಜಿಕ ಹೋರಾಟಗಾರ ಹಾಗೂ ಪ್ರಗತಿಪರ ಚಿಂತಕ ಕೆ.ಎಲ್  ಅಶೋಕ್‌ರವರನ್ನು ಕ್ಷುಲ್ಲಕ ಕಾರಣಕ್ಕೆ ಅವಮಾನಿಸಿ ಕಿರುಕುಳ ನೀಡಿದ ಕೊಪ್ಪ ಪೊಲೀಸರನ್ನು ತಕ್ಷಣ ಅಮಾನತುಗೊಳಿಸಲು ಆಗ್ರಹಿಸಿ ನಗರದ ಪ್ರಗತಿಪರ ಸಂಘನೆಗಳ ವತಿಯಿಂದ ಸೆ.೧೪ರಂದು ಬೆಳಿಗ್ಗೆ ೧೦ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
     ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಂತರ ಮೆರವಣಿಗೆ ಮೂಲಕ ತಹಸೀಲ್ದಾರ್ ಕಛೇರಿ ತಲುಪಿ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.


No comments:

Post a Comment