ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮತ್ತು ನಿವೃತ್ತ ಶಿಕ್ಷ ಕ ಜಿ.ಟಿ ಗುರುಲಿಂಗಯ್ಯ ಅವರಿಗೆ ಸಂತಾಪ ಸೂಚಿಸಲಾಯಿತು .
ಭದ್ರಾವತಿ, ಸೆ. ೧೬: ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ಮತ್ತು ನಿವೃತ್ತ ಶಿಕ್ಷ ಕ ಜಿ.ಟಿ ಗುರುಲಿಂಗಯ್ಯ ಅವರಿಗೆ ಸಂತಾಪ ಸೂಚಿಸಲಾಯಿತು .
ನ್ಯೂ ಟೌನ್ ಪರಿಷತ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೃತರ ಭಾವಚಿತ್ರಗಳಿಗೆ ಪುಷ್ಪನಮನ ಸಲ್ಲಿಸಲಾಯಿತು.
ಪರಿಷತ್ ತಾಲ್ಲೂಕು ಅಧ್ಯಕ್ಷ ಅಪೇಕ್ಷಾ ಮಂಜುನಾಥ್ ಅಧ್ಯಕ್ಷತೆ ವಹಿಸಿದ್ದರು. ಕತ್ತಲಗೆರೆ ತಿಮ್ಮಪ್ಪ ಮೃತರನ್ನು ಸ್ಮರಿಸಿದರು. ಉಪಾಧ್ಯಕ್ಷರಾದ ನಾಸಿರ್ ಖಾನ್, ಕಾರ್ಯದರ್ಶಿಗಳಾದ ಸಿ. ಚೆನ್ನಪ್ಪ, ವೈ ಕೆ. ಹನುಮಂತಯ್ಯ, ಜಿಲ್ಲಾಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಚಂದ್ರಶೇಖರಪ್ಪ ಚಕ್ರಸಾಲಿ, ಪ್ರಮುಖರಾದ ಸುಧಾಮಣಿ, ಧನಂಜಯ, ರೇವಣಪ್ಪ, ಯು. ಮಹಾದೇವಪ್ಪ, ಶಿವರುದ್ರಯ್ಯ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment