Saturday, September 26, 2020

ಮಹಿಳಾ ಕಾಂಗ್ರೆಸ್‌ನಿಂದ ಮಹಿಳೆಯರಿಗಾಗಿ ‘ಘನತೆ’ ಜಾಗೃತಿ ಕಾರ್ಯಕ್ರಮ

ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮುಟ್ಟಿನಿಂದಲೇ ನಮ್ಮೆಲ್ಲರ ಹುಟ್ಟು ಎಂಬ ಘೋಷ ವ್ಯಾಕ್ಯದೊಂದಿಗೆ ಹೆಣ್ಣು ಮಕ್ಕಳಿಗೆ ಋತುಸ್ರಾವದ ಮಾಸದಲ್ಲಿ ಆರೋಗ್ಯದ ಕಾಳಜಿ ಹಾಗು ಕೊರೋನ ಬಗ್ಗೆ ಜಾಗೃತಿ ಮತ್ತು ಸ್ವಚ್ಛತೆ ಕುರಿತು ಅರಿವು ಮೂಡಿಸುವ "ಘನತೆ " ಕಾರ್ಯಕ್ರಮ ಭದ್ರಾವತಿ ಹಳೇನಗರದ ನಿರ್ಮಲ ಆಸ್ಪತ್ರೆ ಹಿಂಭಾಗದ ಹನುಮಂತ ನಗರ ಶ್ರೀ ಚೌಡೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಭದ್ರಾವತಿ, ಸೆ. ೨೫: ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿ ವತಿಯಿಂದ ಮುಟ್ಟಿನಿಂದಲೇ ನಮ್ಮೆಲ್ಲರ ಹುಟ್ಟು ಎಂಬ ಘೋಷ ವ್ಯಾಕ್ಯದೊಂದಿಗೆ ಹೆಣ್ಣು ಮಕ್ಕಳಿಗೆ ಋತುಸ್ರಾವದ ಮಾಸದಲ್ಲಿ ಆರೋಗ್ಯದ ಕಾಳಜಿ ಹಾಗು ಕೊರೋನ ಬಗ್ಗೆ ಜಾಗೃತಿ ಮತ್ತು ಸ್ವಚ್ಛತೆ ಕುರಿತು ಅರಿವು ಮೂಡಿಸುವ "ಘನತೆ " ಕಾರ್ಯಕ್ರಮ ಹಳೇನಗರದ ನಿರ್ಮಲ ಆಸ್ಪತ್ರೆ ಹಿಂಭಾಗದ ಹನುಮಂತ ನಗರ ಶ್ರೀ ಚೌಡೇಶ್ವರ ದೇವಸ್ಥಾನ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
     ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಬದಲಾದ ಕಾಲಘಟ್ಟದಲ್ಲಿ ಮತ್ತಷ್ಟು ಜಾಗೃತಗೊಳ್ಳುವ ಜೊತೆಗೆ ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದು ಕರೆ ನೀಡಲಾಯಿತು. ಇದೆ ಸಂದರ್ಭದಲ್ಲಿ ಮಹಿಳೆಯರಿಗೆ ಬಾಗಿನ ನೀಡಲಾಯಿತು.
      ಮಹಿಳಾ ಕಾಂಗ್ರೆಸ್ ತಾಲೂಕು ಅಧ್ಯಕ್ಷೆ ಮಂಜುಳ ರಾಮಚಂದ್ರ, ಕೆಪಿಸಿಸಿ ಕಾರ್ಮಿಕ ರಾಜ್ಯ ಕಾರ್ಯದರ್ಶಿ ನಳಿನಾ ದಾಮೋದರ್, ತಾಲ್ಲೂಕು ಮಹಿಳಾ ಕಾರ್ಮಿಕ ವಿಭಾಗ ಅಧ್ಯಕ್ಷೆ ರೂಪ ನಾರಾಯಣ್, ಉಪಾಧ್ಯಕ್ಷೆ ಗೀತಾ, ಪದ್ಮಮ್ಮ, ಮಾಜಿ ನಗರಸಭಾ ಸದಸ್ಯರಾದ ಶೋಭಾ ರವಿಕುಮಾರ್, ಗೌರಮ್ಮ ಸೇರಿದಂತೆ ಮಹಿಳಾ ಘಟಕದ ಪದಾಧಿಕಾರಿಗಳು ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment