Tuesday, September 29, 2020

ಅ.೨ರಂದು ಗಾಂಧಿ ಜಯಂತಿ

ಭದ್ರಾವತಿ, ಸೆ. ೨೯: ಕೇಂದ್ರ ಉಕ್ಕು ಪ್ರಾಧಿಕಾರದ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ಅ.೨ರಂದು ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಹಮ್ಮಿಕೊಳ್ಳಲಾಗಿದೆ.
         ನ್ಯೂಟೌನ್ ಶಾರದ ಮಂದಿರದಲ್ಲಿ ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪ್ರತಿ ವರ್ಷದಂತೆ ಈ ಬಾರಿ ಸಹ ಪವಿತ್ರ ಗ್ರಂಥಗಳಾದ ಭಗವದ್ಗೀತೆ, ಬೈಬಲ್ ಮತ್ತು ಕುರಾನ್ ಪಠಣ ನಡೆಯಲಿದೆ. 'ಕೊರೋನಾ ವಾರಿಯರ್ಸ್ ಅಂಡ್ ಸ್ವಚ್ಛ ಹಿ ಸ್ವಾಸ್ಥ್ಯ' ಕುರಿತು ಕಿರುನಾಟಕ, ಗಾಂಧಿಜೀಯವರ ಜೀವನ ಚರಿತ್ರೆ ಕುರಿತು ರಸಪ್ರಶ್ನೆ ಹಾಗು ಗಾಂಧಿಜೀ ಮತ್ತು ದೇಶಭಕ್ತಿ ಗೀತೆಗಳ ಗಾಯನ ನಡೆಯಲಿದೆ. ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕಾರ್ಖಾನೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಲ್ ಪ್ರವೀಣ್‌ಕುಮಾರ್ ಕೋರಿದ್ದಾರೆ.

No comments:

Post a Comment