Thursday, September 24, 2020

ಕೇಂದ್ರ ಸರ್ಕಾರದ ವರ್ತನೆಗೆ ಆಮ್ ಆದ್ಮಿ ಆಕೋಶ


ಭದ್ರಾವತಿಯಲ್ಲಿ ಆಮ್ ಆದ್ಮಿ ಪಾರ್ಟಿ ವತಿಯಿಂದ ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ಹಾಗು ೮ ಜನ ಸಂಸದರನ್ನು ಅಮಾನತುಗೊಳಿಸಿರುವ ಕೇಂದ್ರ ಸರ್ಕಾರದ ವರ್ತನೆ ವಿರುದ್ಧ  ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಗುರುವಾರ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೨೪: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ಮಂಡನೆ ಹಾಗು ೮ ಜನ ಸಂಸದರನ್ನು ಅಮಾನತುಗೊಳಿಸಿರುವ ಕೇಂದ್ರ ಸರ್ಕಾರದ ವರ್ತನೆ ವಿರುದ್ಧ ಆಮ್ ಆದ್ಮಿ ಪಾರ್ಟಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ತಹಸೀಲ್ದಾರ್ ಗ್ರೇಡ್-೨ ರಂಗಮ್ಮ ಮೂಲಕ ಮನವಿ ಸಲ್ಲಿಸಿದೆ.
      ಲೋಕಸಭೆಯಲ್ಲಿ ಬಹುಮತ ಹೊಂದಿರುವ ಬಿಜೆಪಿ ಸರ್ಕಾರ ರಾಜ್ಯಸಭೆಯಲ್ಲಿ ಬಹುಮತವಿಲ್ಲದ ಕಾರಣ ಸಂಸತ್ತಿನ ಸಂಪ್ರದಾಯಗಳನ್ನು ಮುರಿದು, ರೈತ ವಿರೋಧಿ ಮಸೂದೆಗಳನ್ನು ಅಸಂವಿಧಾನಿಕವಾಗಿ ಅಂಗೀಕರಿಸಿದೆ. ಅಸಂವಿಧಾನಿಕ ಪ್ರಕ್ರಿಯೆಯಿಂದಾಗಿ ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆಗೆ ಧಕ್ಕೆ ಬಂದಿದೆ ಎಂದು ವಿಷಾದಿಸಲಾಗಿದೆ.
       ಅಲ್ಲದೆ ಈ ಅಸಂವಿಧಾನಿಕ ನಡೆಯನ್ನು ವಿರೋಧಿಸಿದ ಆಮ್ ಆದ್ಮಿ ಪಕ್ಷದ ಸಂಸದ ಸೇರಿದಂತೆ ೮ ಮಂದಿ ಸಂಸದರನ್ನು ಒಂದು ವಾರದವರೆಗೆ ಅಮಾನತು ಮಾಡಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಇದು ವಿರೋಧಿಗಳ ಬಾಯಿ ಮುಚ್ಚಿಸಲು ಸರ್ಕಾರದ ಸರ್ವಾಧಿಕಾರಿ ವರ್ತನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ.
        ಯಾವುದೇ ಕಾರಣಕ್ಕೂ ಮಸೂದೆ ಕಾನೂನು ರೂಪ ಪಡೆಯಲು ಅವಕಾಶ ನೀಡಬಾರದು. ಪ್ರಜಾ ಪ್ರಭುತ್ವ, ಸಂವಿಧಾನ ಮೌಲ್ಯ ಎತ್ತಿ ಹಿಡಿಯಬೇಕೆಂದು ಮನವಿ ಮಾಡಲಾಗಿದೆ.
       ಪಕ್ಷದ ತಾಲೂಕು ಅಧ್ಯಕ್ಷ ಡಿ.ಎಂ ಚಂದ್ರಪ್ಪ, ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ಪ್ರಮುಖರಾದ ಮುಳ್ಕೆರೆ ಲೋಕೇಶ್, ಪ್ರದೀಪ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment