ಭದ್ರಾವತಿ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿವಾಸಕ್ಕೆ ಶನಿವಾರ ಸಂಸದ ಬಿ.ವೈ ರಾಘವೇಂದ್ರ ಭೇಟಿ ನೀಡಿ ಅಪ್ಪಾಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.
ಭದ್ರಾವತಿ, ಸೆ. ೫: ಕಳೆದ ೩ ದಿನಗಳ ಹಿಂದೆ ನಿಧನ ಹೊಂದಿದ ಮಾಜಿ ಶಾಸಕ ಎಂ.ಜೆ ಅಪ್ಪಾಜಿ ನಿವಾಸಕ್ಕೆ ಸಂಸದ ಬಿ.ವೈ ರಾಘವೇಂದ್ರ ಶನಿವಾರ ಭೇಟಿ ನೀಡಿ ಕುಟುಂಬ ವರ್ಗಕ್ಕೆ ಸಾಂತ್ವಾನ ಹೇಳಿದರು.
ಅಪ್ಪಾಜಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಸಂಸದರು ಗೌರವ ಸೂಚಿಸಿದರು. ಶಾರದ ಅಪ್ಪಾಜಿ, ಪುತ್ರ ಎಂ.ಎ ಅಜಿತ್ ಹಾಗು ಕುಟುಂಬ ವರ್ಗದವರಿಗೆ ಸಾಂತ್ವಾನ ತಿಳಿಸಿದರು.
ಸೂಡ ಅಧ್ಯಕ್ಷ ಜ್ಯೋತಿ ಪ್ರಕಾಶ್, ಮುಖಂಡರಾದ ಎಸ್. ದತ್ತಾತ್ರಿ, ವಿ. ಕದಿರೇಶ್, ಜಿ. ಆನಂದಕುಮಾರ್, ಮಂಗೋಟೆ ರುದ್ರೇಶ್, ಜಿ. ಧರ್ಮಪ್ರಸಾದ್, ಎಂ. ಪ್ರಭಾಕರ್, ಹನುಮಂತನಾಯ್ಕ, ಸಂತೋಷ್ ಬಳ್ಳೇಕೆರೆ, ಕಾಮತ್, ಮೋಹನ್, ಸುನಿಲ್ಗಾಯಕ್ವಾಡ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment