Sunday, September 6, 2020

ಭದ್ರಾವತಿಯಲ್ಲಿ ಎಎಪಿ ಕೇರ್ಸ್, ಆಕ್ಸಿ ಮಿತ್ರ ಯೋಜನೆಗೆ ಚಾಲನೆ

ಭದ್ರಾವತಿ ರಂಗಪ್ಪ ವೃತ್ತದಲ್ಲಿ ಭಾನುವಾರ ಎಎಪಿ ವತಿಯಿಂದ ಕೊರೋನಾ ಸೋಂಕು ಹರಡದಂತೆ ಸಾರ್ವಜನಿಕರಿಗೆ ಜಾಗೃತಿ ಹಾಗು ಆರೋಗ್ಯ ತಪಾಸಣೆ ನಡೆಸಲಾಯಿತು.
ಭದ್ರಾವತಿ, ಸೆ. ೬: ದೇಶಾದ್ಯಂತ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಸೋಂಕು ನಿಯಂತ್ರಣಕ್ಕೆ ಮುಂದಾಗಿರುವ ಆಮ್ ಆದ್ಮಿ ಪಾರ್ಟಿ ನೂತನ ಯೋಜನೆಯನ್ನು ಜಾರಿಗೆ ತರುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ಕೆ ಮುಂದಾಗಿದೆ.
        ಈಗಾಗಲೇ ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಎಎಪಿ ಕೇರ್ಸ್ ಹಾಗು ಆಕ್ಸಿ ಮಿತ್ರ ಯೋಜನೆ ಜಾರಿಗೆ ತಂದಿದೆ. ಪಕ್ಷದ ಮುಖಂಡರು, ಕಾರ್ಯಕರ್ತರು ಯೋಜನೆ ಕುರಿತು ವ್ಯಾಪಕ ನಡೆಸುತ್ತಿದ್ದು, ಭಾನುವಾರ ನಗರದ ರಂಗಪ್ಪ ವೃತ್ತದಲ್ಲಿ ಚಾಲನೆ ನೀಡಲಾಯಿತು.
     ಸೋಂಕು ಹರಡದಂತೆ ವಹಿಸಬೇಕಾದ ಮುನ್ನಚ್ಚರಿಕೆ ಕ್ರಮಗಳನ್ನು ಕುರಿತು ಜಾಗೃತಿ ಮೂಡಿಸಲಾಯಿತು. ಥರ್ಮಲ್ ಸ್ಕ್ಯಾನರ್ ಮೂಲಕ ಜ್ವರ ತಪಾಸಣೆ ನಡೆಸಲಾಯಿತು. ಕೈ ತೋರು ಬೆರಳಿನ ಮೂಲಕ ಆಕ್ಸಿಜನ್ ಪ್ರಮಾಣ ಪರೀಕ್ಷಿಸಲಾಯಿತು. ಸುಮಾರು ೫೦೦ಕ್ಕೂ ಮಂದಿ ತಪಾಸಣೆಯಲ್ಲಿ ಪಾಲ್ಗೊಂಡಿದ್ದರು.
      ಪಕ್ಷದ  ಜಿಲ್ಲಾಧ್ಯಕ್ಷ ಎಚ್. ರವಿಕುಮಾರ್, ತಾಲೂಕು ಉಪಾಧ್ಯಕ್ಷ ಇಬ್ರಾಹಿಂ ಖಾನ್, ಪ್ರಮುಖರಾದ ಪರಮೇಶ್ವರಚಾರ್, ಜೋಸೆಫ್, ಮುಳ್ಕೆರೆ ಲೋಕೇಶ್, ಪರಮೇಶ್‌ನಾಯ್ಕ, ಪಕ್ಷದ ಮಹಿಳಾ ಮುಖಂಡರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment