Saturday, September 12, 2020

ಅಡುಗೆ ಅನಿಲ ಸೋರಿಕೆ : ಗೃಹ ಬಳಕೆ ವಸ್ತುಗಳು ಭಸ್ಮ


ಭದ್ರಾವತಿ, ಸೆ. ೧೨:  ಅಡುಗೆ ಮಾಡುವಾಗ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ಹತ್ತಿಕೊಂಡು ಗೃಹ ಬಳಕೆ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಹುತ್ತಾಕಾಲೋನಿ ಮನೆಯೊಂದರಲ್ಲಿ ನಡೆದಿದೆ.
       ಹುತ್ತಾಕಾಲೋನಿ ಡಿಡಬ್ಲ್ಯೂ.ಸಿ-೩೫ ರಲ್ಲಿ ವಾಸವಾಗಿರುವ ಕಾಳಯ್ಯ ಎಂಬುವರ ಮನೆಯಲ್ಲಿ ಘಟನೆ ಸಂಭವಿಸಿದ್ದು, ಏಕಾಏಕಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹತ್ತಿಕೊಂಡಿದೆ. ತಕ್ಷಣ ಎಚ್ಚೆತ್ತುಕೊಂಡ ಮನೆಯಲ್ಲಿದ್ದವರು ಹೊರಗೆ ಬಂದಿದ್ದು, ಯಾವುದೇ ಜೀವ ಹಾನಿ ಸಂಭವಿಸಿಲ್ಲ.
       ಅಗ್ನಿ ಶಾಮಕ ಠಾಣಾಧಿಕಾರಿ ವಸಂತಕುಮಾರ್ ನೇತೃತ್ವದಲ್ಲಿ ಅಗ್ನಿ ಶಾಮಕ ಸಿಬ್ಬಂದಿಗಳಾದ ಯೋಗೇಂದ್ರ, ಚಾಲಕ ಸುರೇಶಾಚಾರ್, ಡಿ.ಎನ್ ಸುರೇಶ್, ಮಹೇಂದ್ರ, ರಾಜಾನಾಯ್ಕ್ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಮೂಲಕ  ಸಂಭವಿಸಬಹುದಾದ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.             ಆದರೆ  ಬೆಂಕಿಯ ಕೆನ್ನಾಲಿಗೆಗೆ ಟಿವಿ, ರೆಫ್ರಿಜರೇಟರ್ ಸೇರಿದಂತೆ  ಹಲವಾರು ವಸ್ತುಗಳು ಸುಟ್ಟು ಕರಕಲಾಗಿವೆ.  ಈ ಕುರಿತು ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No comments:

Post a Comment