ಮಹೇಶ್
ಭದ್ರಾವತಿ, ಸೆ. ೭: ಬಹಳ ವರ್ಷಗಳಿಂದ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದ ನಗರದ ಉಜ್ಜನಿಪುರ ನಿವಾಸಿ ಮಹೇಶ(೩೫) ಅನಾರೋಗ್ಯದಿಂದ ನಿಧನ ಹೊಂದಿದರು.
ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಅಪ್ಪ, ಅಮ್ಮ ಹಾಗು ಓರ್ವ ಸಹೋದರಿ ಹೊಂದಿದ್ದರು. ಕೆಲವು ದಿನಗಳ ಹಿಂದೆ ಅನಾರೋಗ್ಯಕ್ಕೆ ಒಳಗಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ತಿಮ್ಲಾಪುರ ರಸ್ತೆಯಲ್ಲಿರುವ ಶ್ರೀ ಸತ್ಯ ಹರಿಶ್ಚಂದ್ರ ಹಿಂದೂ ರುದ್ರಭೂಮಿಯಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿತು.
ಸುಮಾರು ೧೫ ವರ್ಷಗಳಿಂದ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದ ಮಹೇಶ್ ನಿಧನಕ್ಕೆ ನಗರದ ಪತ್ರಿಕಾ ವಿತರಕರು, ಪತ್ರಕರ್ತರು ಸಂತಾಪ ಸೂಚಿಸಿದ್ದಾರೆ.
No comments:
Post a Comment