Saturday, September 19, 2020

ಎಂಎಸ್‌ಎಂಇ ನಿರ್ದೇಶಕರಾಗಿ ಉದ್ಯಮಿ ಎಚ್.ಸಿ ರಮೇಶ್ ನೇಮಕ

ಭದ್ರಾವತಿ ಬಿಜೆಪಿ ಮುಖಂಡ, ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಗೆ ನಿರ್ದೇಶಕರನ್ನಾಗಿ ನೇಮಕಗೊಳಿಸಿದ್ದು, ಅವರಿಗೆ ಸಂಸ್ಥೆಯ ಅಧ್ಯಕ್ಷ ಹರಿನಾರಾಯಣ ರಾಜ್‌ಬಾರ್  ಆದೇಶ ಪತ್ರ ವಿತರಿಸಿದರು.
ಭದ್ರಾವತಿ, ಸೆ. ೧೯: ಬಿಜೆಪಿ ಮುಖಂಡ, ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಗೆ ನಿರ್ದೇಶಕರನ್ನಾಗಿ ನೇಮಕಗೊಳಿಸಲಾಗಿದೆ. 
ಕೇಂದ್ರ ಸಚಿ ನಿತಿನ್ ಗಡ್ಕರ್‌ರವರ ಆದೇಶದ ಮೇರೆಗೆ ಸಂಸ್ಥೆಯ ಅಧ್ಯಕ್ಷ, ಉತ್ತರ ಪ್ರದೇಶದ ಲೋಕಸಭಾ ಸದಸ್ಯ ಹರಿನಾರಾಯಣ ರಾಜ್‌ಬಾರ್ ೩ ವರ್ಷಗಳ ಅವಧಿಗೆ ರಮೇಶ್‌ರವರನ್ನು ನಿರ್ದೇಶಕರನ್ನಾಗಿ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ. 
ಎಚ್.ಸಿ ರಮೇಶ್‌ರವರು ನಗರದ ಹಿರಿಯ ಕ್ರೀಡಾಪಟು ರಾಷ್ಟ್ರ ಪ್ರಶಸ್ತಿ ವಿಜೇತ ಎಚ್.ಸಿ ಚನ್ನಯ್ಯರವರ ಪುತ್ರರಾಗಿದ್ದು, ಆರಂಭದಿಂದಲೂ ವಿದ್ಯಾರ್ಥಿ ಸಂಘಟನೆಯಲ್ಲಿ ತೊಡಗಿಸಿಕೊಂಡು ನಂತರ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಇವರು ಪಕ್ಷಕ್ಕೆ ಸಲ್ಲಿಸಿರುವ ಪ್ರಾಮಾಣಿಕ ಸೇವೆ ಹಾಗು ಉದ್ಯಮ ಕ್ಷೇತ್ರದಲ್ಲಿ ಹೊಂದಿರುವ ಅನುಭವ ಪರಿಗಣಿಸಿ ನಿರ್ದೇಶಕರನ್ನಾಗಿ ನೇಮಕಗೊಳಿಸಲಾಗಿದೆ ಎನ್ನಲಾಗಿದೆ. 
ನಿರ್ದೇಶಕರಾಗಿ ನೇಮಕಗೊಳ್ಳಲು ಕಾರಣಕರ್ತರಾಗಿರುವ ಕೇಂದ್ರ ಸಚಿವರಿಗೆ, ಪಕ್ಷದ ವರಿಷ್ಠರಿಗೆ, ಕಾರ್ಯಕರ್ತರಿಗೆ ಎಚ್.ಸಿ ರಮೇಶ್ ಕೃತಜ್ಞತೆ ಸಲ್ಲಿಸಿದ್ದಾರೆ. 
ಸೆ.೨೦ರಂದು ಎಚ್.ಸಿ ರಮೇಶ್ ನಗರಕ್ಕೆ ಆಗಮನ: 
ಎಂಎಸ್‌ಎಂಇ ನಿರ್ದೇಶಕರಾಗಿ ನೇಮಕಗೊಂಡಿರುವ ಎಚ್.ಸಿ ರಮೇಶ್‌ರವರಿಗೆ ನಗರದ ಸ್ನೇಹಿತರು, ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದ್ದಾರೆ. ಸೆ.೨೦ರಂದು ಎಚ್.ಸಿ ರಮೇಶ್‌ರವರು ನಗರಕ್ಕೆ ಆಗಮಿಸುತ್ತಿದ್ದು, ಈ ಹಿನ್ನಲೆಯಲ್ಲಿ ಅವರನ್ನು ನಗರದ ತರೀಕೆರೆ ರಸ್ತೆ ಮಹಾತ್ಮಗಾಂಧಿ ವೃತ್ತದಲ್ಲಿ ಅದ್ದೂರಿಯಾಗಿ ಸ್ವಾಗತಿಸಲು ಸಿದ್ದತೆಗಳು ನಡೆದಿವೆ. 
ಮಹಾತ್ಮಗಾಂಧಿ ವೃತ್ತದಿಂದ ನಂತರ ಮೆರವಣಿಗೆ ನಡೆಯಲಿದ್ದು, ನ್ಯೂಟೌನ್ ಲಯನ್ಸ್  ಕ್ಲಬ್‌ನಲ್ಲಿ ಸಂಜೆ ೫.೩೦ಕ್ಕೆ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. 

No comments:

Post a Comment