Wednesday, September 23, 2020

ಮನೆಗಳ್ಳತನ ಪ್ರಕರಣ ಇಬ್ಬರ ಬಂಧನ : ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶ

ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಭದ್ರಾವತಿ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವುದು.
ಭದ್ರಾವತಿ, ಸೆ. ೨೩:  ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ ವಶಪಡಿಸಿಕೊಳ್ಳುವಲ್ಲಿ ಇಲ್ಲಿನ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿರುವ ಘಟನೆ ಬುಧವಾರ ನಡೆದಿದೆ.
     ದಾವಣಗೆರೆ ಚನ್ನಗಿರಿ ತಾಲೂಕಿನ ಮಾವಿನಕಟ್ಟೆ ನಿವಾಸಿಗಳಾದ ನಾಗರಾಜನಾಯ್ಕ(೨೪) ಮತ್ತು ಗಣೇಶನಾಯ್ಕ(೩೧) ಎಂಬುವರನ್ನು ಬಂಧಿಸಲಾಗಿದೆ. ಬಂಧಿತರಿಂದ ೫೦ ಗ್ರಾಂ. ತೂಕದ ಬಂಗಾರದ ಆಭರಣಗಳು, ೨೪೦ ಗ್ರಾಂ. ತೂಕದ ಬೆಳ್ಳಿಯ ಆಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡಿರುವ ಚಿನ್ನಾಭರಣಗಳ ಒಟ್ಟು ಅಂದಾಜು ಮೌಲ್ಯ ೨,೩೨,೫೦೦ ರು. ಗಳಾಗಿವೆ.
    ಈ ಇಬ್ಬರು ಬಂಧಿತರು ಹೊಳೆಹೊನ್ನೂರು ಅಶೋಕನಗರದ ಮನೆಯೊಂದರಲ್ಲಿ ೨೦ ಫೆಬ್ರವರಿ ೨೦೧೯ರಂದು ಹಾಗೂ ಬೆಳ್ಳಿಗೆರೆ ಗ್ರಾಮದ ಮನೆಯೊಂದರಲ್ಲಿ ೧೯ ಮೇ ೨೦೨೦ರಂದು ನಡೆದಿದ್ದ ಮನೆಗಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದರು.
     ಕಳವು ಪ್ರಕರಣ ಬೇಧಿಸಲು ಪೊಲೀಸ್ ಉಪಾಧೀಕ್ಷಕ ಸುಧಾಕರ ಎಸ್. ನಾಯಕ್ ಮಾರ್ಗದರ್ಶನದಲ್ಲಿ ಗ್ರಾಮಾಂತರ ವೃತ್ತ ನಿರೀಕ್ಷಕ ಇ.ಓ ಮಂಜುನಾಥ್ ನೇತೃತ್ವದ ತಂಡ ರಚಿಸಲಾಗಿತ್ತು.

No comments:

Post a Comment