Monday, September 14, 2020

ಕೆ.ಎಲ್ ಅಶೋಕ್ ಮೇಲಿನ ದೌರ್ಜನ್ಯ ಪ್ರಕರಣ : ಪೊಲೀಸರ ಅಮಾನತಿಗೆ ಆಗ್ರಹ

ಪ್ರಗತಿಪರ ಸಂಘಟನೆಗಳಿಂದ ತಹಸೀಲ್ದಾರ್‌ಗೆ ಮನವಿ

ಭದ್ರಾವತಿಯಲ್ಲಿ ಸೋಮವಾರ ಸಾಮಾಜಿಕ ಹೋರಾಟಗಾರ  ಕೆ.ಎಲ್ ಅಶೋಕ್‌ರವರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪ ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿ  ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೪: ಸಾಮಾಜಿಕ ಹೋರಾಟಗಾರ, ಕೋಮು ಸೌಹಾರ್ದ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಲ್ ಅಶೋಕ್‌ರವರನ್ನು ವಿನಾಕಾರಣ ನಿಂದಿಸಿ ದೌರ್ಜನ್ಯ ನಡೆಸಿರುವ ಕೊಪ್ಪ ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿ ಸೋಮವಾರ ಪ್ರಗತಿಪರ ಸಂಘಟನೆಗಳ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಎಚ್.ಸಿ ಶಿವಕುಮಾರ್‌ಗೆ ಮನವಿ ಸಲ್ಲಿಸಲಾಯಿತು.
        ಅಶೋಕ್‌ರವರು ಕುಟುಂಬ ಸಮೇತ ಕೊಪ್ಪ ತಾಲೂಕಿಗೆ ತೆರಳಿದ್ದಾಗ ಅಲ್ಲಿನ ಪೊಲೀಸರು ವಾಹನ ನಿಲುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿನಾಕಾರಣ ನಿಂದಿಸಿ ದೌರ್ಜನ್ಯ ನಡೆಸಿದ್ದಾರೆ. ಅಶೋಕ್‌ರವರು ಯಾರೆಂಬುದು ತಿಳಿದಿದ್ದರೂ ಸಹ ಈ ರೀತಿ ದೌರ್ಜನ್ಯ ನಡೆಸಿರುವುದು ಸರಿಯಲ್ಲ. ಉದ್ದೇಶಪೂರ್ವಕವಾಗಿ ಈ ಘಟನೆ ನಡೆದಿದ್ದು, ಈ ಹಿನ್ನಲೆಯಲ್ಲಿ ಘಟನೆಗೆ ಕಾರಣಕರ್ತರಾದ ಪೊಲೀಸರನ್ನು ತಕ್ಷಣ ಅಮಾನತುಗೊಳಿಸುವಂತೆ ಆಗ್ರಹಿಸಿದರು.
     ಪ್ರಗತಿಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಡಿ.ಸಿ ಮಾಯಣ್ಣ ನೇತೃತ್ವ ವಹಿಸಿದ್ದರು. ಮುಖಂಡರಾದ ಜಿ. ರಾಜು, ಫೀರ್ ಷರೀಫ್, ಎಚ್. ರವಿಕುಮಾರ್, ಮುನೀರ್ ಅಹಮದ್, ರಾಜೇಂದ್ರ, ನಾಗವೇಣಿ, ಜೆ.ಬಿ.ಟಿ ಬಾಬು, ಇಬ್ರಾಹಿಂ ಖಾನ್, ಲಿಂಗೋಜಿರಾವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment