Friday, September 18, 2020

ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಮೂಲಕ ವಿಷ್ಣು ಜನ್ಮ ದಿನಾಚರಣೆ

ಭದ್ರಾವತಿಯಲ್ಲಿ ಡಾ. ವಿಷ್ಣುವರ್ಧನ್ ೭೦ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಡಾ. ವಿಷ್ಣು ಸೇವಾ ಸಮಿತಿ ವತಿಯಿಂದ ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
ಭದ್ರಾವತಿ, ಸೆ. ೧೮:  ಚಲನಚಿತ್ರ ನಟ, ಸಾಹಸ ಸಿಂಹ ದಿವಂಗತ ಡಾ. ವಿಷ್ಣುವರ್ಧನ್ ೭೦ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಡಾ. ವಿಷ್ಣು ಸೇವಾ ಸಮಿತಿ ವತಿಯಿಂದ ನಗರದ ವಿವಿಧ ಶಾಲಾ-ಕಾಲೇಜುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.  
     ನ್ಯೂಟೌನ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಶ್ರೀ ಸತ್ಯಸಾಯಿ ಸಮಗ್ರ ಶಿಕ್ಷಣ ಸಂಸ್ಥೆ ಸೇರಿದಂತೆ ವಿವಿಧೆಡೆ ಸಸಿ ನೆಡಲಾಯಿತು.
      ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎನ್ ಸೋಮಶೇಖಯ್ಯ, ಉಪ ವಲಯ ಅರಣ್ಯಾಧಿಕಾರಿ ದಿನೇಶ್‌ಕುಮಾರ್, ಜ್ಯೂನಿಯರ್ ವಿಷ್ಣುವರ್ಧನ್, ಕಲಾವಿದ ಅಪೇಕ್ಷ ಮಂಜುನಾಥ್, ಸಿಆರ್‌ಪಿ ಸಿ. ಚನ್ನಪ್ಪ, ಮಾನವ ಹಕ್ಕುಗಳ ಹೋರಾಟ ಸಮಿತಿ ಅಧ್ಯಕ್ಷ ಬಿ.ಎನ್ ರಾಜು, ಎಲ್. ದೇವರಾಜ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.


ವಿಷ್ಣು ಸೇನೆ ವತಿಯಿಂದ ನಗರಸಭೆ ವ್ಯಾಪ್ತಿಯ ಹೊಸಮನೆ ಮುಖ್ಯ ರಸ್ತೆಯಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಜನ್ಮ ದಿನ ಆಚರಿಸಲಾಯಿತು
       ಹೊಸಮನೆಯಲ್ಲಿ ವಿಷ್ಣು ಜನ್ಮ ದಿನಾಚರಣೆ:
      ವಿಷ್ಣು ಸೇನೆ ವತಿಯಿಂದ ನಗರಸಭೆ ವ್ಯಾಪ್ತಿಯ ಹೊಸಮನೆ ಮುಖ್ಯ ರಸ್ತೆಯಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಜನ್ಮ ದಿನ ಆಚರಿಸಲಾಯಿತು.
      ವಿಷ್ಣು ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಸಿಹಿ ಹಂಚಲಾಯಿತು. ಮುಖಂಡರಾದ ವೆಂಕಟೇಶ್, ಶಿವು, ವಿನಯ್, ಅವಿ, ಕಂಠ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

No comments:

Post a Comment