Sunday, September 20, 2020

ಹೋರಾಟದ ಮೂಲಕ ಕೈಗಾರಿಕಾ ನಗರದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಎಚ್.ಸಿ ರಮೇಶ್

ಭದ್ರಾವತಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನ ಸಮಾರಂಭವನ್ನು ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್ ಉದ್ಘಾಟಿಸಿದರು.
ಭದ್ರಾವತಿ, ಸೆ.೨೦ :  ಕೈಗಾರಿಕಾ ನಗರದ ಸರ್ವತೋಮುಖ ಅಭಿವೃದ್ಧಿಗಾಗಿ ಹೋರಾಟ ನಡೆಸುವುದಾಗಿ ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್ ಭರವಸೆ ವ್ಯಕ್ತಪಡಿಸಿದರು.
        ಎಂಎಸ್‌ಎಂಇ ಸಂಸ್ಥೆಗೆ ನೇಮಕಗೊಂಡ ನಂತರ ಅವರು ಮೊದಲ ಬಾರಿಗೆ  ಭಾನುವಾರ  ನಗರಕ್ಕೆ ಆಗಮಿಸಿದ ಹಿನ್ನೆಲೆಯಲ್ಲಿ ನ್ಯೂಟೌನ್ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರ ಅಭಿನಂದನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.
       ವಿಐಎಸ್‌ಎಲ್ ಕಾರ್ಖಾನೆಯ ಕಾರ್ಮಿಕನ ಮಗನಾಗಿ ಹುಟ್ಟಿರುವ ನಾನು ಈ ನಗರದ ಋಣ ತೀರಿಸುವುದು ನನ್ನ ಜವಾಬ್ದಾರಿಯಾಗಿದೆ. ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ಬಹಳ ಪ್ರಮುಖವಾದ ಜವಬ್ದಾರಿಯನ್ನು ನೀಡಿದ್ದಾರೆ.  ನನಗೆ ವಹಿಸಿಕೊಟ್ಟಿರುವ ಜವಬ್ದಾರಿಗೆ ಸದಾ ಚಿರಋಣಿಯಾಗಿದ್ದು, ಕ್ಷೇತ್ರದಲ್ಲಿ ಸಾಮಾನ್ಯ ಜನರ ಸಂಕಷ್ಟಗಳನ್ನು ಅರಿತು ಅವರ ಪರವಾಗಿ ಹೋರಾಟ ನಡೆಸಲು ಸಿದ್ದವಾಗಿದ್ದೇನೆ. ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಸಹ ಸ್ಪಂದಿಸುವುದಾಗಿ ಭರವಸೆ ನೀಡಿದರು.
       ಎಂಪಿಎಂ ಮತ್ತು ವಿಐಎಸ್‌ಎಲ್ ಎರಡು ಕಾರ್ಖಾನೆಗಳ ಸಮಸ್ಯೆಗಳನ್ನು ರಾಜ್ಯ ಮತ್ತು ಕೇಂದ್ರ ನಾಯಕರುಗಳ ಬಳಿ ಕೊಂಡೊಯ್ದು ವಾಸ್ತವ ಸ್ಥಿತಿಗತಿಗಳನ್ನು ಮನವರಿಕೆ ಮಾಡಿಕೊಡುವ ಮೂಲಕ ಗಮನ ಸೆಳೆಯಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಕ್ಷೇತ್ರದ ಸಮಸ್ತ ನಾಗರೀಕರು, ಪಕ್ಷದ ಸ್ಥಳೀಯ ಮುಖಂಡರು, ಕಾರ್ಯಕರ್ತರು ಮುಂದಿನ ದಿನಗಳಲ್ಲಿ ಹೆಚ್ಚಿನ ಸಹಕಾರ ನೀಡಬೇಕೆಂದು ಮನವಿ ಮಾಡಿದರು.    


ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ಕೇಂದ್ರ ಸರ್ಕಾರದ ಮೈಕ್ರೋ ಸ್ಮಾಲ್ ಮೀಡಿಯಂ ಎಂಟರ್ ಪ್ರೈಸಸ್(ಎಂ.ಎಸ್.ಎಂ.ಇ) ಸಂಸ್ಥೆಯ ನೂತನ ನಿರ್ದೇಶಕ,  ಉದ್ಯಮಿ ಎಚ್.ಸಿ ರಮೇಶ್‌ರವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

    ನಗರಸಭೆ ಹಿರಿಯ ಸದಸ್ಯ ಕೆ.ಎನ್ ಭೈರಪ್ಪಗೌಡ, ಕಟ್ಟಡ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಸುಂದರ್ ಬಾಬು ಮಾತನಾಡಿದರು. ಇದಕ್ಕೂ ಮೊದಲು ನಗರಕ್ಕೆ ಆಗಮಿಸಿದ ಎಚ್.ಸಿ ರಮೇಶ್‌ರವರನ್ನು ನಮೋ ಗ್ರೂಪ್ ಮತ್ತು ಬಿಜೆಪಿ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು.
        ಭಾರತರತ್ನ ಸರ್.ಎಂ ವಿಶ್ವೇಶ್ವರಯ್ಯ ಚಾರಿಟಬಲ್ ಟ್ರಸ್ಟ್, ಶ್ರೀ ಡಿ. ದೇವರಾಜ ಅರಸು ಜನಸ್ಪಂದನ ವೇದಿಕೆ ಮತ್ತು ಸುವರ್ಣ ಮಹಿಳಾ ವೇದಿಕೆ ವತಿಯಿಂದ ರಮೇಶ್‌ರವನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
     ಟ್ರಸ್ಟ್ ಛೇರ‍್ಮನ್ ಆರ್. ವೇಣುಗೋಪಾಲ್, ಪ್ರಮುಖರಾದ ಅಂತೋಣಿ ಗ್ಸೇವಿಯರ್, ಭವಾನಿ ಶಂಕರ್, ಆರ್. ಮುಕುಂದಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment