Friday, October 30, 2020

ಅಗ್ನಿಶಾಮಕ, ಗೃಹರಕ್ಷಕದಳ ಸಿಬ್ಬಂದಿಗಳಿಂದ ಸ್ವಚ್ಛತಾ ಕಾರ್ಯ

ಭದ್ರಾವತಿ ನಗರಸಭೆ ಸಹಯೋಗದೊಂದಿಗೆ ಗುರುವಾರ ಹೊಸಬುಳ್ಳಾಪುರದ ಅಗ್ನಿಶಾಮಕ ಠಾಣೆ ಆವರಣದ ಸುತ್ತಲೂ ಹಾಗು ಹಿಂಭಾಗದ ರಸ್ತೆ, ಚರಂಡಿಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
ಭದ್ರಾವತಿ: ನಗರಸಭೆ ಸಹಯೋಗದೊಂದಿಗೆ ಗುರುವಾರ ಹೊಸಬುಳ್ಳಾಪುರದ ಅಗ್ನಿಶಾಮಕ ಠಾಣೆ ಆವರಣದ ಸುತ್ತಲೂ ಹಾಗು ಹಿಂಭಾಗದ ರಸ್ತೆ, ಚರಂಡಿಗಳಲ್ಲಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.
     ಠಾಣೆಯ ಹಿಂಭಾಗದ ರಸ್ತೆ ಮತ್ತು ಚರಂಡಿಗಳಲ್ಲಿ ಆಳೆತ್ತರಕ್ಕೆ ಬೆಳೆದು ನಿಂತ ಗಿಡ ಗಂಟೆಗಳನ್ನು ತೆಗೆದು ಸ್ವಚ್ಛಗೊಳಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು. ಅಗ್ನಿಶಾಮಕ ಠಾಣಾಧಿಕಾರಿ ಎನ್. ವಸಂತಕುಮಾರ್ ನೇತೃತ್ವದಲ್ಲಿ ಅಗ್ನಿಶಾಮಕ ಹಾಗೂ ಗೃಹರಕ್ಷಕದಳ ಸಿಬ್ಬಂದಿಗಳು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

No comments:

Post a Comment