ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ.೫ ಮತ್ತು ೭ರಲ್ಲಿ ಬಾಕ್ಸ್ ಮಾದರಿ ಚರಂಡಿ ಕಾಮಗಾರಿ ವ್ಯವಸ್ಥಿತವಾಗಿ ಕೈಗೊಳ್ಳುವಂತೆ ಒತ್ತಾಯಿಸಿ ಎಸ್ಡಿಪಿಐ ವತಿಯಿಂದ ಪೌರಾಯುಕ್ತ ಮನೋಹರ್ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಅ. ೨: ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ವತಿಯಿಂದ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. ೫ ಮತ್ತು ೭ರಲ್ಲಿ ಕೈಗೊಳ್ಳಲಾಗುತ್ತಿರುವ ಬಾಕ್ಸ್ ಮಾದರಿ ಚರಂಡಿ ನಿರ್ಮಾಣ ಕಾಮಗಾರಿ ವ್ಯವಸ್ಥಿತವಾಗಿ ಕೈಗೊಂಡಿಲ್ಲ. ಇದರಿಂದಾಗಿ ಇಲ್ಲಿನ ನಿವಾಸಿಗಳು ತೊಂದರೆ ಅನುಭವಿಸುವಂತಾಗಿದೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪೌರಾಯುಕ್ತ ಮನೋಹರ್ಗೆ ಮನವಿ ಸಲ್ಲಿಸಲಾಗಿದೆ.
ವಾರ್ಡ್ ನಂ.೭ರ ಖಲಂದರಿಯಾ ವ್ಯಾಪ್ತಿಯಲ್ಲಿ ಚರಂಡಿ ಕಾಮಗಾರಿ ಸರಿಯಾಗಿ ಕೈಗೊಳ್ಳದ ಕಾರಣ ಕಲ್ಮಶಗೊಂಡ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ದುರ್ವಾಸನೆಯಿಂದಾಗಿ ಸ್ಥಳೀಯ ನಿವಾಸಿಗಳು, ರಸ್ತೆಯಲ್ಲಿ ಸಂಚರಿಸುವವರು ತೊಂದರೆ ಅನುಭವಿಸುವಂತಾಗಿದೆ.
ವಾರ್ಡ್ ನಂ.೫ರ ಖಾಜಿ ಮೊಹಲ್ಲಾದಲ್ಲಿ ಚರಂಡಿ ಕಾಮಗಾರಿ ನಡೆಯುತ್ತಿದ್ದು, ಇಂಜಿನಿಯರ್ ಶ್ರೇಯಸ್ರವರು ಕಾಮಗಾರಿ ನಿರ್ವಹಣೆ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಆದರೆ ಕಾಮಗಾರಿ ಸೂಕ್ತ ರೀತಿಯಲ್ಲಿ ನಡೆಯುತ್ತಿಲ್ಲ. ಇದನ್ನು ಪ್ರಶ್ನಿಸಲು ಮುಂದಾದರೆ ಶ್ರೇಯಸ್ರವರು ಉಡಾಫೆಯಿಂದ ವರ್ತಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಲಾಗಿದೆ.
No comments:
Post a Comment