ಗುರುವಾರ, ಅಕ್ಟೋಬರ್ 22, 2020

ಕೊರೋನಾಗೆ ಎಂಪಿಎಂ ಹಣಕಾಸು ಅಧಿಕಾರಿ ಬಲಿ

ವಿಶ್ವನಾಥ ಮಲಗನ್
ಭದ್ರಾವತಿ: ರಾಜ್ಯ ಸರ್ಕಾರಿ ಸ್ವಾಮ್ಯದ ನಗರದ ಮೈಸೂರು ಕಾಗದ ಕಾರ್ಖಾನೆಯ  ಮುಖ್ಯ ಹಣಕಾಸು ಅಧಿಕಾರಿ ವಿಶ್ವನಾಥ ಮಲಗನ್(೫೯) ಗುರುವಾರ ನಿಧನ ಹೊಂದಿದರು.
     ಪತ್ನಿ, ಓರ್ವ ಪುತ್ರ ಹೊಂದಿದ್ದರು. ಹಳೇನಗರದ ವೀರಶೈವ ರುದ್ರಭೂಮಿಯಲ್ಲಿ ಇವರ ಅಂತ್ಯಕ್ರಿಯೆ ನೆರವೇರಿತು. ಕೊರೋನಾ ಸೋಂಕಿನ ಹಿನ್ನಲೆಯಲ್ಲಿ ಕಳೆದ ೨ ವಾರದ ಹಿಂದೆ ಅನಾರೋಗ್ಯಕ್ಕೆ ಒಳಗಾಗಿ ಶಿವಮೊಗ್ಗ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
     ಸರ್ಕಾರ ಜಾರಿಗೊಳಿಸಿದ ೨೦೧೭ ಸ್ವಯಂ ನಿವೃತ್ತಿ ಯೋಜನೆಯಡಿ ಸ್ವಯಂ ನಿವೃತ್ತಿ ಹೊಂದಿದ್ದರು. ನಂತರ ನಿಯೋಜನೆ ಮೇಲೆ ಹುದ್ದೆಯಲ್ಲಿ ಮುಂದುವರೆದಿದ್ದರು. ಕಾರ್ಮಿಕರಿಗೆ ಸ್ವಯಂ ನಿವೃತ್ತಿ ಹಣ ಕೊಡಿಸುವ ಕಾರ್ಯದಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು. ಅಲ್ಲದೆ ಹಣಕಾಸಿನ ಇಲಾಖೆಗೆ ಸಂಬಂಧಿಸಿದ ಬಹುತೇಕ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಯಶಸ್ವಿಯಾಗಿದ್ದರು.
   ಮೃತರ ನಿಧನಕ್ಕೆ ಎಂಪಿಎಂ ಕಾರ್ಖಾನೆಯ ವಿವಿಧ ಕಾರ್ಮಿಕ ಸಂಘಟನೆಗಳು, ಅಧಿಕಾರಿಗಳು ಸಂತಾಪ ಸೂಚಿಸಿದ್ದಾರೆ.


1 ಕಾಮೆಂಟ್‌: