ಭದ್ರಾವತಿ ಅಭಿವೃದ್ಧಿ ವೇದಿಕೆಯಿಂದ ಶ್ರದ್ದಾಂಜಲಿ, ಗೌರವ
ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಹಿರಿಯ ಕಾರ್ಮಿಕ ಮುಖಂಡ ಎಚ್.ಜಿ ಉಮಾಪತಿಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿದರು.
ಭದ್ರಾವತಿ, ಅ. ೨೩: ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯನ್ನು ಉಕ್ಕು ಪ್ರಾಧಿಕಾರದ ಅಧೀನಕ್ಕೆ ವಹಿಸಿಕೊಡುವ ಕಾರ್ಯದಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾರ್ಮಿಕ ಮುಖಂಡ ದಿವಂಗತ ಎಚ್.ಜಿ ಉಮಾಪತಿಯವರಿಗೆ ಶುಕ್ರವಾರ ಭದ್ರಾವತಿ ಅಭಿವೃದ್ಧಿ ವೇದಿಕೆ ವತಿಯಿಂದ ಶ್ರದ್ದಾಂಜಲಿ ಸಲ್ಲಿಸುವ ಮೂಲಕ ಗೌರವ ಸೂಚಿಸಲಾಯಿತು.
ಇತ್ತೀಚೆಗೆ ಬೆಂಗಳೂರಿನಲ್ಲಿ ಉಮಾಪತಿಯವರು ನಿಧನ ಹೊಂದಿದ್ದರು. ಈ ಹಿನ್ನಲೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ನೇತೃತ್ವದಲ್ಲಿ ಶ್ರದ್ದಾಂಜಲಿ ಸಭೆ ನಡೆಸಿದ ವೇದಿಕೆ ಮುಖಂಡರು ಉಮಾಪತಿಯವರು ಕಾರ್ಖಾನೆಯಲ್ಲಿ ಸಾಮಾನ್ಯ ಕಾರ್ಮಿಕನಾಗಿ ಸೇವೆ ಸಲ್ಲಿಸುವ ಮೂಲಕ ಕಾರ್ಮಿಕ ಮುಖಂಡರಾಗಿ ಬೆಳೆದು ಎಲ್ಲರ ಒಡನಾಡಿಯಾಗಿದ್ದರು. ಅಲ್ಲದೆ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸೇವಾದಳ ಘಟಕದಲ್ಲಿ ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದರು ಎಂದು ಸ್ಮರಿಸಿದರು.
ಶ್ರದ್ದಾಂಜಲಿ ಸಭೆಯಲ್ಲಿ ಹಿರಿಯ ಕಾರ್ಮಿಕ ಮುಖಂಡ ಡಿ.ಸಿ ಮಾಯಣ್ಣ, ಸಹಕಾರ ಧುರೀಣ ಕೆ.ಎನ್ ಭೈರಪ್ಪಗೌಡ, ವಿಐಎಸ್ಎಲ್ ಕಾರ್ಮಿಕ ಸಂಘದ ಅಧ್ಯಕ್ಷ ಜೆ. ಜಗದೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment