ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೃಷಿ ಯಂತ್ರಧಾರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯಂತ್ರ ಶ್ರೀ ಯೋಧರ ತರಬೇತಿ ಕಾರ್ಯಾಗಾರ ನಡೆಯಿತು.
ಭದ್ರಾವತಿ, ಅ. ೨೮: ತಾಲೂಕಿನ ಕೂಡ್ಲಿಗೆರೆ ಹೋಬಳಿ ಕೃಷಿ ಯಂತ್ರಧಾರೆ ಆವರಣದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಯಂತ್ರ ಶ್ರೀ ಯೋಧರ ತರಬೇತಿ ಕಾರ್ಯಾಗಾರ ನಡೆಯಿತು.
ಯೋಜನಾಧಿಕಾರಿ ಸುಧೀರ ಜೈನ್ ಕಾರ್ಯಾಗಾರ ಉದ್ಘಾಟಿಸಿದರು. ರೈತರಿಗೆ ಕಡಿಮೆ ಖರ್ಚಿನಲ್ಲಿ ಭತ್ತದ ಬೇಸಾಯ ಯಂತ್ರದ ಮೂಲಕ ಅನುಷ್ಠಾನಗೊಳಿಸುವ ಬಗ್ಗೆ, ಭತ್ತದ ಬೀಜೋಪಚಾರ, ಟ್ರೇಗಳಲ್ಲಿ ಸಸಿಮಡಿ ತಯಾರಿ ಹಾಗೂ ಯಂತ್ರದ ಮೂಲಕ ಭತ್ತ ನಾಟಿ ಸೇರಿದಂತೆ ಇನ್ನಿತರ ಮಾಹಿತಿ ನೀಡಲಾಯಿತು.
ಕೃಷಿ ಯಂತ್ರಧಾರೆ ಯೋಜನಾಧಿಕಾರಿ ನಿಂಗಪ್ಪ ಅಗಸರ ಯಂತ್ರಗಳ ಬಗ್ಗೆ ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಭದ್ರಾವತಿ, ತರೀಕೆರೆ, ಕೊಪ್ಪ, ಶೃಂಗೇರಿ ಮತ್ತು ಎನ್.ಆರ್ ಪುರ ತಾಲೂಕಿನ ಆಯ್ದ ೨೦ ಮಂದಿ ಯಂತ್ರ ಶ್ರೀ ಯೋಧರು ಭಾಗವಹಿಸಿದರು. ಯಂತ್ರದ ಮೂಲಕ ಭತ್ತದ ಬೆಳೆ ಯಶಸ್ವಿಯಾಗಿ ಅನುಷ್ಠಾನಗೊಳಿಸಿರುವ ಕೃಷಿಕರಾದ ತಾಲೂಕಿನ ದೊಡ್ಡೇರಿ ಶ್ರೀರಾಮು ಮತ್ತು ಬಾಳೆಕಟ್ಟೆ ಅನಸೂಯಮ್ಮ ಪಾಲ್ಗೊಂಡಿದ್ದರು. ವಿವಿಧ ತಾಲೂಕಿನ ಕೃಷಿ ಅಧಿಕಾರಿಗಳು, ಕೃಷಿ ಯಂತ್ರಧಾರೆ ಪ್ರಬಂಧಕರು ಭಾಗವಹಿಸಿದ್ದರು. ಗೋವಿಂದಪ್ಪ ನಿರೂಪಿಸಿದರು. ಪ್ರಸನ್ನ ಕುಮಾರ ಸ್ವಾಗತಿಸಿದರು. ಉಮೇಶ ವಂದಿಸಿದರು.
No comments:
Post a Comment