Sunday, October 11, 2020

ಮಹಿಳೆಯ ಕೊರಳಿನಲ್ಲಿದ್ದ ಚಿನ್ನದ ಸರ ಅಪಹರಣ

ಭದ್ರಾವತಿ, ಅ. ೧೧: ದೇವಸ್ಥಾನಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರ ಕೊರಳಿನಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ನಗರಸಭೆ ವ್ಯಾಪ್ತಿಯ ಭಂಡಾರಹಳ್ಳಿಯಲ್ಲಿ ನಡೆದಿದೆ.
      ಭಂಡಾರಹಳ್ಳಿ ನಿವಾಸಿ ವಸಂತಿ ಎಂಬುವರು ಪತಿ ಕೃಷ್ಣಪ್ಪನಾಯಕ ಮತ್ತು ತನ್ನ ೩ ಚಿಕ್ಕ ಮಕ್ಕಳೊಂದಿಗೆ ಶನಿವಾರ ಮಧ್ಯಾಹ್ನ ಸುಮಾರು ೧.೪೫ರ ಸಮಯದಲ್ಲಿ ಮನೆಯ ಸಮೀಪದಲ್ಲಿರುವ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ದ್ವಿಚಕ್ರವಾಹನದಲ್ಲಿ ಬಂದ ಅಪರಿಚಿತ ವ್ಯಕ್ತಿಯೋರ್ವ ಕೊರಳಿನಲ್ಲಿದ್ದ ಸುಮಾರು ೩೦ ಗ್ರಾಂ. ತೂಕದ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದು, ಅಪಹರಿಸಲಾಗಿರುವ ಚಿನ್ನದ ಸರದ ಅಂದಾಜು ಮೌಲ್ಯ ೯೦ ಸಾವಿರ ರು. ಗಳಾಗಿದ್ದು, ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




No comments:

Post a Comment