Friday, October 30, 2020

ಪ್ರಧಾನ ಅಂಚೆ ಕಛೇರಿಯಲ್ಲಿ ಜಾಗೃತಿ ಸಪ್ತಾಹ : ಆಶು ಭಾಷಣ ಸ್ಪರ್ಧೆ

ಭದ್ರಾವತಿ ಪ್ರಧಾನ ಅಂಚೆ ಕಛೇರಿಯಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ ನೌಕರರ ಜಾಗೃತಿ ಕುರಿತ ವಿಶೇಷ ಆಶು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.
ಭದ್ರಾವತಿ: ನಗರದ ಪ್ರಧಾನ ಅಂಚೆ ಕಛೇರಿಯಲ್ಲಿ ಜಾಗೃತಿ ಸಪ್ತಾಹದ ಅಂಗವಾಗಿ ನೌಕರರ ಜಾಗೃತಿ ಕುರಿತ ವಿಶೇಷ ಆಶು ಭಾಷಣ ಸ್ಪರ್ಧೆ ಆಯೋಜಿಸಲಾಗಿತ್ತು.
     ವಿಐಎಸ್‌ಎಸ್‌ಜೆ ಸರ್ಕಾರಿ ಪಾಲಿಟೆಕ್ನಿಕ್ ವಿದ್ಯುತ್ ಮತ್ತು ವಿದ್ಯುನ್ಮಾನ ವಿಭಾಗದ ಅಧಿಕಾರಿ ಎಚ್.ಆರ್ ಶ್ರೀಧರೇಶ್ ಭಾರದ್ವಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿ, ಸದ್ಗುಣಗಳಿಂದ ನಾಗರೀಕ ಸಮಾಜದ ಪ್ರಜ್ಞಾವಂತ ಪ್ರಜೆಗಳಾಗಿ ಬದುಕುವ ಜೊತೆಗೆ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ನೌಕರರ ಜವಾಬ್ದಾರಿ ಕುರಿತು ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಧಾನ ಅಂಚೆ ಪಾಲಕ ವಿ. ಶಶಿಧರ್ ಮಾತನಾಡಿ, ಅಂಚೆ ಕಛೇರಿಯ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡುವ ಜೊತೆಗೆ ಸಮಾಜದಲ್ಲಿ ಅಂಚೆ ಇಲಾಖೆಯ ಮಹತ್ವ ವಿವರಿಸಿದರು.  
     ಪಾಲಿಟೆಕ್ನಿಕ್ ಹಿರಿಯ ಶ್ರೇಣಿ ಉಪನ್ಯಾಸಕ ಬಾಲಸುಬ್ರಮಣ್ಯ ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಸುಮಾರು ೩೫ ಮಂದಿ ಅಂಚೆ ನೌಕರರು ಪಾಲ್ಗೊಂಡಿದ್ದರು. ನೌಕರರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
     ನಿತ್ಯಾನಂದ ನಾಯಕ್ ಪ್ರಾರ್ಥಿಸಿದರು. ನಾಗರಾಜ್ ಪೂಜಾರ್ ಸ್ವಾಗತಿಸಿದರು. ಉದಯ ಆಚಾರ್ ನಿರೂಪಿಸಿದರು.

No comments:

Post a Comment