Sunday, November 1, 2020

೬೫ನೇ ಕನ್ನಡ ರಾಜ್ಯೋತ್ಸವ : ಆರೋಗ್ಯ ಇಲಾಖೆ ಸಿಬ್ಬಂದಿಗೆ ಸನ್ಮಾನ

ಭದ್ರಾವತಿ ಆಮ್ ಆದ್ಮಿ ಪಾರ್ಟಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೬೫ನೇ ಕನ್ನಡ ರಾಜ್ಯೋತ್ಸವದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ವೀಣಾರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ನ. ೧: ನಗರದ ಆಮ್ ಆದ್ಮಿ ಪಾರ್ಟಿ ಕಛೇರಿಯಲ್ಲಿ ಭಾನುವಾರ ೬೫ನೇ ವರ್ಷದ ಕನ್ನಡ ರಾಜ್ಯೋತ್ಸವ ಸರಳವಾಗಿ ಆಚರಿಸಲಾಯಿತು.
     ಧ್ವಜಾರೋಹಣದೊಂದಿಗೆ ತಾಯಿ ರಾಜರಾಜೇಶ್ವರಿ ಪೂಜೆ ಸಲ್ಲಿಸಲಾಯಿತು. ಪ್ರಸ್ತುತ ವಿಶ್ವದಾದ್ಯಂತ ವ್ಯಾಪಿಸಿರುವ ಕೋವಿಡ್-೧೯ ನಿಯಂತ್ರಿಸುವಲ್ಲಿ ಕೊರೋನಾ ವಾರಿಯರ್ಸ್‌ಗಳಾಗಿ ಪ್ರಮುಖ ಪಾತ್ರ ವಹಿಸುತ್ತಿರುವ ಆರೋಗ್ಯ ಇಲಾಖೆ ವೈದ್ಯರು ಮತ್ತು ಸಿಬ್ಬಂದಿಗಳನ್ನು ಗುರುತಿಸಿ ಗೌರವಿಸುವ ಕಾರ್ಯ ಎಲ್ಲೆಡೆ ನಡೆಯುತ್ತಿದ್ದು, ಈ ಬಾರಿ ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿರುವ ವೀಣಾರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು.
   ಪಕ್ಷದ ಪ್ರಮುಖರಾದ ಪರಮೇಶ್ವರಚಾರ್, ಇಬ್ರಾಹಿಂ ಖಾನ್, ಶೈಲಜಾ, ಪರಮೇಶ್ವರನಾಯ್ಕ್, ಪ್ರದೀಪ್, ಲೋಕೇಶ್, ಬಿ.ಕೆ ರಮೇಶ್, ರೇಷ್ಮ, ಎಚ್. ರವಿಕುಮಾರ್, ಜಾವೇದ್, ಮುಳ್ಕೆರೆಲೋಕೇಶ್ ಸೇರಿದಂತೆ ಇತರರು ಉಪಸ್ಥಿತರಿದ್ದರು.  ಇದೆ ಸಂದರ್ಭದಲ್ಲಿ ಸುಮಾರು ೧೫ಕ್ಕೂ ಹೆಚ್ಚು ಮಂದಿ ಯುವಕರು ಪಕ್ಷಕ್ಕೆ ಸೇರ್ಪಡೆಗೊಂಡರು.

No comments:

Post a Comment