Friday, November 27, 2020

ಓಬಿಸಿ ಮೋರ್ಚಾ ಕಾರ್ಯಕಾರಿಣಿ ಸಭೆ, ನ.೨೮ರಿಂದ ೨ ದಿನ ಪ್ರಶಿಕ್ಷಣ ವರ್ಗ

ಭದ್ರಾವತಿ ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆಯನ್ನು ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಾಲತೇಶ್ ಉದ್ಘಾಟಿಸಿದರು.
ಭದ್ರಾವತಿ, ನ. ೨೭: ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಓಬಿಸಿ ಮೋರ್ಚಾದ ಕಾರ್ಯಕಾರಿಣಿ ಸಭೆ ನಡೆಯಿತು.
    ಸಭೆಯನ್ನು ಓಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಾಲತೇಶ್ ಉದ್ಘಾಟಿಸಿದರು. ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲೋಕೇಶ್, ಜಿಲ್ಲಾ ಕಾರ್ಯದರ್ಶಿ ಪ್ರದೀಪ್, ತಾಲೂಕು ಮಂಡಲದ ಅಧ್ಯಕ್ಷ ಎಂ. ಪ್ರಭಾಕರ್, ತಾಲೂಕು ಓಬಿಸಿ ಮೋರ್ಚಾ ಅಧ್ಯಕ್ಷ ಸುಬ್ರಹ್ಮಣಿ, ಪ್ರಧಾನ ಕಾರ್ಯದರ್ಶಿ ಆರ್.ಪಿ ವೆಂಕಟೇಶ್, ರಾಜಶೇಖರ್, ಮಂಜಪ್ಪ ಸೇರಿದಂತೆ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
          ನ.೨೮ರಂದು ಪ್ರಶಿಕ್ಷಣ ವರ್ಗ :
     ಪಕ್ಷದ ತಾಲೂಕು ಮಟ್ಟದ ಪ್ರಶಿಕ್ಷಣ ವರ್ಗ ನ.೨೮ ಮತ್ತು ೨೯ ಎರಡು ದಿನ ಜನ್ನಾಪುರದ ಮಲ್ಲೇಶ್ವರ ಸಮುದಾಯ ಭವನದಲ್ಲಿ ನಡೆಯಲಿದೆ. ನ.೨೮ರ ಬೆಳಿಗ್ಗೆ ೯.೩೦ಕ್ಕೆ ಜಿಲ್ಲಾಧ್ಯಕ್ಷ ಮೇಘರಾಜ್ ಉದ್ಘಾಟಿಸಲಿದ್ದು, ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಮಾಧ್ಯಮ್ ಪ್ರಮುಖ್ ಬಿ.ಎಸ್ ಶ್ರೀನಾಥ್ ಕೋರಿದ್ದಾರೆ.


No comments:

Post a Comment