Sunday, November 22, 2020

ಬಸ್ ನಿಲ್ದಾಣ ಪುನರ್ ನಿರ್ಮಾಣಕ್ಕೆ ಆಗ್ರಹಿಸಿ ನಗರಸಭೆಗೆ ಮನವಿ

ಭದ್ರಾವತಿ ಚನ್ನಗಿರಿ ರಸ್ತೆಯ ಉಪನೋಂದಣಾಧಿಕಾರಿಗಳ ಕಛೇರಿ ಮುಂಭಾಗ ನೆಲಸಮಗೊಳಿಸಿರುವ ೨ ಬಸ್ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕನಾ೯ಟಕ ಜನ ಸೈನ್ಯ ವಿದ್ಯಾರ್ಥಿ ಘಟಕದ ವತಿಯಿಂದ ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೨೨: ನಗರದ ಚನ್ನಗಿರಿ ರಸ್ತೆಯ ಉಪನೋಂದಣಾಧಿಕಾರಿಗಳ ಕಛೇರಿ ಮುಂಭಾಗ ನೆಲಸಮಗೊಳಿಸಿರುವ ೨ ಬಸ್ ನಿಲ್ದಾಣಗಳನ್ನು ಪುನರ್ ನಿರ್ಮಾಣ ಮಾಡುವಂತೆ ಆಗ್ರಹಿಸಿ ಕನಾ೯ಟಕ ಜನ ಸೈನ್ಯ ವಿದ್ಯಾರ್ಥಿ ಘಟಕದ ವತಿಯಿಂದ ನಗರಸಭೆ ಆಡಳಿತಕ್ಕೆ ಮನವಿ ಸಲ್ಲಿಸಲಾಯಿತು.
    ಯಾವುದೇ ರೀತಿ ಟೆಂಡರ್ ಕರೆಯದೆ ಬಸ್ ನಿಲ್ದಾಣಗಳನ್ನು ಅನಧಿಕೃತವಾಗಿ ನೆಲಸಮ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ, ಸಾರ್ವಜನಿಕರಿಗೆ ತೊಂದರೆಯಾಗಿದ್ದು, ತಕ್ಷಣ ತಾತ್ಕಾಲಿಕವಾಗಿ ಬಸ್ ನಿಲ್ದಾಣಗಳನ್ನು ನಿರ್ಮಾಣ ಮಾಡಬೇಕೆಂದು ಹಾಗು ಕಾನೂನು ಬಾಹಿರವಾಗಿ ಬಸ್ ನಿಲ್ದಾಣಗಳನ್ನು ನೆಲಸಮಗೊಳಿಸಿರುವ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
    ಮನವಿ ಸ್ವೀಕರಿಸಿದ ನಗರಸಭೆ ಇಂಜಿನಿಯರ್ ರಂಗರಾಜಪುರೆ ಮುಂದಿನ ಕ್ರಮ ಕೈಗೊಳ್ಳುವ ಭರವಸೆ  ನೀಡಿದರು. ಘಟಕದ ಅಧ್ಯಕ್ಷ ದೀಕ್ಷಿತ್, ಕಾರ್ಯಕರ್ತರಾದ ಸುದೈವ, ಮನೋಜ್, ಮಂಜುನಾಥ್, ಗಿರೀಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment