ಡಿಎಸ್ಎಸ್ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ
ಭದ್ರಾವತಿ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ವೃತ್ತವನ್ನು ಅಭಿವೃದ್ಧಿಪಡಿಸಿ ಹೆಚ್ಚಿನ ಅನುದಾನ ಬಳಸಿ ಸುಮಾರು ೧೧ ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಷ ಸಮಿತಿ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ನ. ೨೩: ನಗರದ ಬಿ.ಎಚ್ ರಸ್ತೆ ಅಂಡರ್ ಬ್ರಿಡ್ಜ್ ಬಳಿ ಇರುವ ಅಂಬೇಡ್ಕರ್ ವೃತ್ತವನ್ನು ಅಭಿವೃದ್ಧಿಪಡಿಸಿ ಹೆಚ್ಚಿನ ಅನುದಾನ ಬಳಸಿ ಸುಮಾರು ೧೧ ಅಡಿ ಎತ್ತರದ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘಷ ಸಮಿತಿ ವತಿಯಿಂದ ಸೋಮವಾರ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ ಸಲ್ಲಿಸಲಾಯಿತು.
ರಾಜ್ಯ ಖಜಾಂಚಿ ಸತ್ಯ ಮಾತನಾಡಿ, ಸಮಿತಿ ವತಿಯಿಂದ ಈ ಹಿಂದೆ ನಿರಂತರವಾಗಿ ಹೋರಾಟ ನಡೆಸಿದ ಪರಿಣಾಮ ಅಂಡರ್ ಬ್ರಿಡ್ಜ್ ವೃತ್ತಕ್ಕೆ ೨೦೦೪ರಲ್ಲಿ ಅಂದಿನ ಶಾಸಕರಾಗಿದ್ದ ದಿವಂಗತ ಎಂ.ಜೆ ಅಪ್ಪಾಜಿ ಹಾಗು ನಗರಸಭೆ ಆಡಳಿತ ಅಂಬೇಡ್ಕರ್ ವೃತ್ತ ಹೆಸರನ್ನು ಶಿಫಾರಸ್ಸು ಮಾಡಿದ ಪರಿಣಾಮ ಸರ್ಕಾರದಿಂದ ಅಧಿಕೃತವಾಗಿ ನಾಮಕರಣಗೊಳಿಸಿ ಉದ್ಘಾಟಿಸಲಾಯಿತು. ನಂತರ ೨೦೦೬ರಲ್ಲಿ ತಾವು ಶಾಸಕರಾಗಿದ್ದ ಅವಧಿಯಲ್ಲಿ ಪ್ರತಿಮೆ ಪ್ರತಿಷ್ಠಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದು, ೨೦೦೭ರಲ್ಲಿ ಬಿ.ಎಸ್ ಯಡಿಯೂರಪ್ಪ ೬ ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ್ದರು ಎಂದರು.
ತದ ನಂತರ ವೃತ್ತವನ್ನು ಅಭಿವೃದ್ಧಿಗೊಳಿಸಿ ೧೧ ಅಡಿ ಎತ್ತರದ ನೂತನ ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಬೇಕೆಂದು ಹೋರಾಟ ನಡೆಸಲಾಯಿತು. ಇದರ ಪರಿಣಾಮ ನಗರಸಭೆ ಆಡಳಿತ ಸುಮಾರು ರು. ೨೫ ಲಕ್ಷ ಅನುದಾನ ಮೀಸಲಿರಿಸಿತ್ತು. ಅಂದಿನ ಜಿಲ್ಲಾಧಿಕಾರಿಯಾಗಿದ್ದ ವಿ.ಪಿ ಇಕ್ಕೇರಿಯವರು ರು.೧೦ ಲಕ್ಷ ಹೆಚ್ಚಿನ ಅನುದಾನ ಮೀಸಲಿರಿಸುವಂತೆ ನಗರಸಭೆ ಆಡಳಿತಕ್ಕೆ ಸೂಚಿಸಿದ್ದರು. ಪ್ರಸ್ತುತ ವೃತ್ತವನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರು.೩೫ ಲಕ್ಷ ಅನುದಾನದ ಜೊತೆಗೆ ಹೆಚ್ಚುವರಿಯಾಗಿ ರು.೧೫ ಲಕ್ಷ ಸೇರಿಸಿ ಒಟ್ಟು ರು. ೫೦ ಲಕ್ಷ ವೆಚ್ಚದಲ್ಲಿ ನೂತನ ಪ್ರತಿಮೆ ಪ್ರತಿಷ್ಠಾಪಿಸಬೇಕು. ವೃತ್ತವನ್ನು ಮತ್ತಷ್ಟು ವಿಸ್ತರಿಸಿ ನಗರವನ್ನು ಸುಂದರಗೊಳಿಸುವ ಜೊತೆಗೆ ಸುಗಮ ಸಂಚಾರ ವ್ಯವಸ್ಥೆಗೆ ಅನುಕೂಲ ಕಲ್ಪಿಸಿಕೊಡುವಂತೆ ಕೋರಿದರು.
ಮನವಿ ಸ್ವೀಕರಿಸಿದ ಶಾಸಕ ಬಿ.ಕೆ ಸಂಗಮೇಶ್ವರ್, ನೂತನ ಪ್ರತಿಮೆ ನಿರ್ಮಾಣಕ್ಕೆ ಹೆಚ್ಚಿನ ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಡಿಎಸ್ಎಸ್ ಜಿಲ್ಲಾ ಸಂಚಾಲಕ ಚಿನ್ನಯ್ಯ, ಮುಖಂಡರಾದ ಡಿ. ರಾಜು, ಈಶ್ವರಪ್ಪ ಸೇರಿದಂತೆ ಇನ್ನಿತರರು ಮಾತನಾಡಿದರು. ತಹಸೀಲ್ದಾರ್ ಗ್ರೇಡ್-೨ ರಂಗಮ್ಮ, ನಗರಸಭೆ ಪೌರಾಯುಕ್ತ ಮನೋಹರ್, ಕಂದಾಯಾಧಿಕಾರಿ ಪ್ರಶಾಂತ್, ಪೊಲೀಸ್ ನಗರವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಉಪಸ್ಥಿತರಿದ್ದರು.
ಡಿಎಸ್ಎಸ್ ತಾಲೂಕು ಸಂಚಾಲಕ ಕೆ. ರಂಗನಾಥ್, ರಾಜ್ಯ ಸಹ ಸಂಚಾಲಕಿ ಪಿ.ಆರ್ ಶಾಂತಿ, ಅಂಗವಿಕಲರ ವಿಭಾಗದ ಜಿಲ್ಲಾಧ್ಯಕ್ಷ ಕಾಣಿಕ್ರಾಜ್, ಜಿಲ್ಲಾ ಸಮಿತಿ ಸದಸ್ಯ ಜಿಂಕ್ಲೈನ್ ಮಣಿ, ಶಿವಶಂಕರ್, ಕೆ. ಸುರೇಶ್, ಆರ್. ಸಂದೀಪ, ನರಸಿಂಹ, ಪಿ.ಸಿ ರಾಜು(ದಾಸ), ಅವಿನಾಶ್, ಪ್ರಸನ್ನ, ಪೊಬಾಲನ್, ಕೆ. ಕುಪ್ಪಸ್ವಾಮಿ, ಮಂಜುಮಣಿ, ಗೋವಿಂದ, ಕಬಡ್ಡಿ ಸುಬ್ಬು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment