Wednesday, November 25, 2020

ಕಸಾಪ ವತಿಯಿಂದ ನ.೨೬ರಂದು ದತ್ತಿ ಕಾರ್ಯಕ್ರಮ

ಭದ್ರಾವತಿ, ನ. ೨೫: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ದತ್ತಿ ದಾನಿಗಳಾದ ವಿಜಾಪುರ ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ವಿಭಾಗದ ಡಾ. ಎಸ್.ಎಸ್ ವಿಜಯ ಸಹಕಾರೊಂದಿಗೆ ನ.೨೬ರಂದು ಬೆಳಿಗ್ಗೆ ೧೧ ಗಂಟೆಗೆ ಕಾಗದನಗರದ ಆಂಗ್ಲ ಶಾಲೆ(ಪಿಟಿಇಎಸ್)ಯ ದತ್ತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
     ಎಂಪಿಎಂ ಶಿಕ್ಷಣ ಸಂಸ್ಥೆಗಳ ಕೋಶಾಧ್ಯಕ್ಷ ಎಂ.ಡಿ ರವಿಕುಮಾರ್ ಉದ್ಘಾಟಿಸಲಿದ್ದು, ಕಸಾಪ ಅಧ್ಯಕ್ಷ ಅಪೇಕ್ಷ ಮಂಜುನಾಥ್ ಅಧ್ಯಕ್ಷತೆ ವಹಿಸಲಿದ್ದಾರೆ. ವಚನಗಾರ್ತಿಯರ ವಚನ ಗಾಯನ ಮತ್ತು ವ್ಯಾಖ್ಯಾನ ಕುರಿತು ಬೊಮ್ಮನಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕ ಎ. ತಿಪ್ಪೇಸ್ವಾಮಿ ಉಪನ್ಯಾಸ ನೀಡಲಿದ್ದು, ಕಸಾಪ ಜಿಲ್ಲಾ ಉಪಾಧ್ಯಕ್ಷ ಎಚ್.ಎನ್ ಮಹಾರುದ್ರ ಆಶಯ ನುಡಿಗಳನ್ನಾಡಲಿದ್ದಾರೆ. ಪ್ರಾಂಶುಪಾಲರಾದ ಆರ್. ಸತೀಶ್, ಜಿ.ಎನ್ ಲಕ್ಷ್ಮೀಕಾಂತ, ಮುಖ್ಯೋಪಾಧ್ಯಾಯಿನಿ ಭಾರತಿ, ಕಸಾಪ ಕಾರ್ಯದರ್ಶಿಗಳಾದ ಸಿ. ಚನ್ನಪ್ಪ, ವೈ.ಕೆ ಹನುಮಂತಯ್ಯ, ಕೋಶಾಧ್ಯಕ್ಷ ಜಿ.ಎನ್ ಸತ್ಯಮೂರ್ತಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.


No comments:

Post a Comment