Thursday, November 12, 2020

ಮಹಿಳಾ ಸಮಾಜದಿಂದ ಸಂಸದರಿಗೆ ಸನ್ಮಾನ, ಅಭಿನಂದನೆ

ಭದ್ರಾವತಿ ವಿಧಾನಸಭಾ ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿರುವ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಭದ್ರಾವತಿ, ನ. ೧೨: ಕ್ಷೇತ್ರದಲ್ಲಿ ಸಂಸದರ ನಿಧಿಯಿಂದ ಹಲವಾರು ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ಬಿಡುಗಡೆಗೊಳಿಸುವಲ್ಲಿ ಯಶಸ್ವಿಯಾಗಿರುವ ಲೋಕಸಭಾ ಸದಸ್ಯ ಬಿ.ವೈ ರಾಘವೇಂದ್ರರನ್ನು ಹಳೇನಗರದ ಮಹಿಳಾ ಸೇವಾ ಸಮಾಜದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
      ಹಳೇನಗರದ ಬಸವೇಶ್ವರ ವೃತ್ತದಲ್ಲಿರುವ ಸಮಾಜದ ಕಟ್ಟಡದ ಮೊದಲ ಹಂತದ ಕಾಮಗಾರಿ ಮುಕ್ತಾಯಗೊಂಡು ಉದ್ಘಾಟನೆಗೆ ಸಿದ್ದಗೊಂಡಿದೆ. ಎರಡನೇ ಹಂತದ ಕಾಮಗಾರಿಗೆ ಸಂಸದರ ನಿಧಿಯಿಂದ ರು.೨೦ ಲಕ್ಷ ಬಿಡುಗಡೆಯಾಗಿದ್ದು, ಈ ಹಿನ್ನಲೆಯಲ್ಲಿ ಸಂಸದರಿಗೆ ಸಮಾಜದ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದರು.
    ಸಮಾಜದ ಅಧ್ಯಕ್ಷೆ ಹೇಮಾವತಿ ವಿಶ್ವನಾಥ್, ಪದಾಧಿಕಾರಿಗಳಾದ ಶೋಭಾ ಗಂಗಾರಾಜ್, ಜಯಂತಿ ನಾಗರಾಜ್, ಕಮಲಕುಮಾರಿ, ಶಕುಂತಲಾ, ಕಮಲರಾಯ್ಕರ್, ಸೂಡ ಅಧ್ಯಕ್ಷ ಎಸ್ ಎಸ್ ಜ್ಯೋತಿ ಪ್ರಕಾಶ್, ಬಿಜೆಪಿ ಅಧ್ಯಕ್ಷ ಎಂ. ಪ್ರಭಾಕರ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

No comments:

Post a Comment