ಭದ್ರಾವತಿಯಲ್ಲಿ ಕೇರಳ ಸಮಾಜಂ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೬೫ನೇ ಕನ್ನಡ ರಾಜ್ಯೋತ್ಸವ ಜನ್ನಾಪುರದಲ್ಲಿರುವ ಕಛೇರಿ ಆವರಣದಲ್ಲಿ ಅಚರಿಸಲಾಯಿತು.
ಭದ್ರಾವತಿ, ನ. ೬: ಕೇರಳ ಸಮಾಜಂ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿ ಸಹ ೬೫ನೇ ಕನ್ನಡ ರಾಜ್ಯೋತ್ಸವ ಜನ್ನಾಪುರದಲ್ಲಿರುವ ಕಛೇರಿ ಆವರಣದಲ್ಲಿ ಅಚರಿಸಲಾಯಿತು.
ಕೇರಳ ಸಮಾಜಂ ಅಧ್ಯಕ್ಷ ಗಂಗಾಧರ್ ಧ್ವಜಾರೋಹಣ ನೆರವೇರಿಸಿದರು. ಮಹಿಳಾ ವಿಭಾಗಂ ಸದಸ್ಯರ ನಾಡಗೀತೆಯೊಂದಿಗೆ ಕಾರ್ಯಕ್ರಮ ಆರಂಭಿಸಲಾಯಿತು. ಕಾರ್ಯದರ್ಶಿ ಕಲ್ಯಾಣಿ ಶಶಿಧರನ್ ಕರ್ನಾಟಕ ಉದಯ ಹಾಗು ವೈಭವದ ರಾಜ್ಯೋತ್ಸವ ಕುರಿತು ಮಾತನಾಡಿದರು.
ಕಾರ್ಯದರ್ಶಿ ಪಿ.ಆರ್ ಪ್ರಭಾಕರನ್, ಖಜಾಂಚಿ ಎ. ಚಂದ್ರಶೇಖರ್ ಸೇರಿದಂತೆ ಪದಾಧಿಕಾರಿಗಳು, ಮುಖಂಡರು, ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
No comments:
Post a Comment