ಗುರುವಾರ, ನವೆಂಬರ್ 5, 2020

ಟಿಎಪಿಸಿಎಂಎಸ್ ಚುನಾವಣೆ : ೭ ಸ್ಥಾನಗಳಿಗೆ ಶಾಸಕರ ಬೆಂಬಲಿಗರು ಆಯ್ಕೆ

ಸಂಗಮೇಶ್ವರ್ ಜೊತೆ ಸಂಭ್ರಮ ಹಂಚಿಕೊಂಡ ಬೆಂಬಲಿಗರು, ಕಾರ್ಯಕರ್ತರು

ಭದ್ರಾವತಿ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸೊಸೈಟಿ (ಟಿಎಪಿಸಿಎಂಎಸ್)ಗೆ ನಡೆದ ಚುನಾವಣೆಯಲ್ಲಿ ಹೆಚ್ಚಿನ ಮತಗಳೊಂದಿಗೆ ಜಯಶೀಲರಾದ ಬೆಂಬಲಿಗರನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಅಭಿನಂದಿಸಿದರು.
ಭದ್ರಾವತಿ: ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸೊಸೈಟಿ (ಟಿಎಪಿಸಿಎಂಎಸ್)ಗೆ ನಡೆದ ಚುನಾವಣೆಯಲ್ಲಿ ಶಾಸಕ ಬಿ.ಕೆ ಸಂಗಮೇಶ್ವರ್ ಬೆಂಬಲಿಗರು ಹೆಚ್ಚಿನ ಮತಗಳೊಂದಿಗೆ ಜಯಗಳಿಸಿದ್ದಾರೆ.
    ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷೆ ಕೆ.ಎಂ ಕಾವೇರಮ್ಮ, ನಗರಸಭೆ ಮಾಜಿ ಅಧ್ಯಕ್ಷ ಬಿ.ಟಿ.ನಾಗರಾಜ್, ಅತ್ತಿಗುಂದ ಆರ್. ಶ್ರೀನಿವಾಸ್, ಓ.ಎನ್ ರತ್ನಮ್ಮ, ಡಿ.ಬಿ ಹಳ್ಳಿ ಬಸವರಾಜ್, ಎಚ್.ಲೋಕೇಶಪ್ಪ, ಮತ್ತು ನಂಜಪ್ಪ ಆಯ್ಕೆಯಾಗಿದ್ದಾರೆ.
ಬೆಂಬಲಿಗರು ಚುನಾವಣೆಯಲ್ಲಿ ಜಯಶೀಲರಾದ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಶಾಸಕರು ಬೆಂಬಲಿಗರನ್ನು ಅಭಿನಂದಿಸುವ ಮೂಲಕ ರೈತರಿಗೆ ಇನ್ನೂ ಹೆಚ್ಚಿನ ನೆರವಾಗುವ ರೀತಿಯಲ್ಲಿ ನೂತನ ಆಡಳಿತ ಮಂಡಳಿ ಮುನ್ನಡೆಸುವಂತೆಕೊಂಡು ಕರೆ ನೀಡಿದರು.
   ಶಾಸಕರೊಂದಿಗೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಚುನಾವಣೆಯಲ್ಲಿ ಜಯಶೀಲರಾದ ಬೆಂಬಲಿಗರು ಕಾಂಗ್ರೆಸ್ ಬಾವುಟ ಹಿಡಿದು ಜೈಕಾರ ಹಾಕುವ ಮೂಲಕ ಸಂಭ್ರಮ ಹಂಚಿಕೊಂಡರು.
    ಶಶಿಧರ್ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದರು. ಬ್ಲಾಕ್ ಕಾಂಗ್ರೆಸ್ ಸಮಿತಿ ಗ್ರಾಮಾಂತರ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ, ಮುಖಂಡರಾದ ಟಿ. ಜನಾರ್ಧನ, ಅಣ್ಣೋಜಿರಾವ್, ಎಂ. ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ