Thursday, November 26, 2020

ವಿವಿಧ ಬೇಡಿಕೆ ಈಡೇರಿಕೆಗಾಗಿ ಗ್ರಾಮೀಣ ನೌಕರರ ಪ್ರತಿಭಟನೆ

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘಟನೆ(ಎಐಜಿಡಿಎಸ್‌ಯು)ವತಿಯಿಂದ ಗುರುವಾರ ಭದ್ರಾವತಿಯಲ್ಲಿ ವಿಐಎಸ್‌ಎಲ್ ಕಾರ್ಖಾನೆ ಸಮೀಪದಲ್ಲಿರುವ ಪ್ರಧಾನ ಅಂಚೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಭದ್ರಾವತಿ, ನ. ೨೬: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ನೌಕರರ ಸಂಘಟನೆ(ಎಐಜಿಡಿಎಸ್‌ಯು)ವತಿಯಿಂದ ಗುರುವಾರ ನಗರದ ವಿಐಎಸ್‌ಎಲ್ ಕಾರ್ಖಾನೆ ಸಮೀಪದಲ್ಲಿರುವ ಪ್ರಧಾನ ಅಂಚೆ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
   ಗ್ರಾಮೀಣ ಅಂಚೆ ನೌಕರರನ್ನು ಖಾಯಂಗೊಳಿಸಬೇಕು, ಸೇವಾವಧಿಯಲ್ಲಿ ಕಾಲ ಕಾಲಕ್ಕೆ ಬಡ್ತಿ ನೀಡಬೇಕು, ವೈದ್ಯಕೀಯ ಸೌಲಭ್ಯ ಕಲ್ಪಿಸಬೇಕು, ೧೮೦ ದಿನಗಳ ರಜಾ ನಗದೀಕರಣಕ್ಕೆ ಮಂಜೂರಾತಿ ನೀಡಬೇಕು, ತಡೆಹಿಡಿದ ತುಟ್ಟಿ ಭತ್ಯೆಯನ್ನು ಬಿಡುಗಡೆಗೊಳಿಸಬೇಕು, ಹಬ್ಬದ ಮುಂಗಡ ಹಣವನ್ನು ಬಡ್ಡಿ ರಹಿತವಾಗಿ ನೀಡಬೇಕು, ಗುಂಪು ವಿಮಾ ಮೊತ್ತ ಹೆಚ್ಚಿಸಬೇಕು ಮತ್ತು ಕಾನೂನು ಬದ್ದವಲ್ಲದ ಫೆಡಿಲಿಟಿ ಬಾಂಡ್ ನೀತಿ ರದ್ದುಗೊಳಿಸಬೇಕು ಸೇರಿದಂತೆ ಇತ್ಯಾದಿ ೧೨ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಲಾಯಿತು.
  ಸಂಘಟನೆಯ ಶಿವಮೊಗ್ಗ ವಿಭಾಗದ ಖಜಾಂಚಿ ಎಚ್.ವಿ ರಾಜ್‌ಕುಮಾರ್ ನೇತೃತ್ವ ವಹಿಸಿದ್ದರು. ಅಂಚೆ ಕಛೇರಿಯ ಎಲ್ಲಾ ಗ್ರಾಮೀಣ ಅಂಚೆ ನೌಕರರು ಪಾಲ್ಗೊಂಡಿದ್ದರು.

No comments:

Post a Comment